ವಿಜಯಪುರ: ಆರೋಗ್ಯದಲ್ಲಿ ಏರುಪೇರಾಗಿ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರವಷ್ಟೇ ತೀವ್ರ ಉಸಿರಾಟ ತೊಂದರೆಯಿಂದ ಅಸ್ವಸ್ಥಗೊಂಡಿದ್ದರು ಬೆಳಗಾವಿ ಮೂಲಕ ದೆಹಲಿಗೆ ತೆರಳುವ ವೇಳೆ ಬಾಗಲಕೋಟೆಯಲ್ಲಿ ದಿಢೀರನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಸಂಸದ ರಮೇಶ್ ಜಿಗಜಿಣಗಿ ಅವರನ್ನು ಸ್ಥಳೀಯ ಕುಮಾರೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತು.
ಕಳೆದೊಂದು ವಾರದಿಂದ ಸಂಸದರು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿದೆ. ಈ ನಡುವೆ ಲೋಕಸಭಾ ಚುಣಾವಣೆಗೆ ಓಡಾಟ, ಪ್ರಯಾಣ ಹೆಚ್ಚಾಗಿದ್ದರಿಂದ ಮತ್ತೆ ದಿಡೀರ್ ಆರೋಗ್ಯ ಏರುಪೇರಾಗಿದೆ.