Thursday, May 9, 2024

ಹನೆಹಳ್ಳಿಯಲ್ಲಿ ಗುಂಡೇಟಿಗೆ ಯುವಕ ಬಲಿ

ಉಡುಪಿ : ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದ್ದು ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ಕೃಷ್ಣ (36) ಮೃತ ಯುವಕ, ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಮೃತ ಕೃಷ್ಣ ಹನೆಹಳ್ಳಿ ಗ್ರಾಮದಲ್ಲಿ ಒಂಟಿಯಾಗಿ ವಾಸವಾಗಿದ್ದ, ಶನಿವಾರ ರಾತ್ರಿ 9:30ರ ಸುಮಾನಲ್ಲಿ ತನ್ನ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.  ಫೈರಿಂಗ್ ಶಬ್ದ ಕೇಳಿಸಿದ್ದು ಅಕ್ಕಪಕ್ಕದ ಮನೆಯವರು ಯಾರೋ ಪಟಾಕಿ ಹಚ್ಚಿರಬೇಕು ಎಂದು ಸುಮ್ಮನಾಗಿದ್ದರು. ಆದರೇ, ರಾತ್ರಿ ಕೇಳಿಬಂದ ಶಬ್ದವು ಗುಂಡಿನ ಸದ್ದು ಎಂದು ಇಂದು ಬೆಳಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ: ದಿವ್ಯಾಂಗರಿಗೆ ಅನುಕಂಪ ಬೇಡ ಅವಕಾಶ ಕೊಡಬೇಕು:ಬಸವರಾಜ ಬೊಮ್ಮಾಯಿ

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ, ಇನ್ನು ಈ ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES