ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
2ನೇ FSL ವರದಿಯಲ್ಲಿ ಪಾಕ್ ಪರ ಘೋಷಣೆ ಧೃಡವಾದ ಬೆನ್ನಲ್ಲೇ ಅಶೋಕ್ ನಗರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ದೆಹಲಿ ಮೂಲದ ಇಲ್ತಾಜ್, RT ನಗರದ ಮುನಾವರ್ ಹಾಗೂ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ್ದು, ಕಾರ್ಯಕರ್ತರು ವಿಜಯ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶದ್ರೋಹಿ ಘೋಷಣೆ ಕೂಗಿದ್ದರು. ಕಾಂಗ್ರೆಸ್ ಮುಖಂಡ ನಾಸೀರ್ ಹುಸೇನ್ ವಿಜೇತರಾಗಿದ್ದರು. ಈ ಹಿನ್ನೆಲೆ ನಾಸೀರ್ ಹುಸೇನ್ ವಿಜಯೋತ್ಸವದಲ್ಲಿ ದೇಶದ್ರೋಹಿ ಘೋಷಣೆ ಕೂಗಿ ವಿಧಾನಸೌಧದಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದರು.