Monday, May 20, 2024

ಜೈ ಶ್ರೀರಾಮ್ ಅಂತ ಕೂಗುತ್ತಾ ಹಸಿವಿನಿಂದ ಸಾಯಲಿ ಎಂದು ಮೋದಿ ಬಯಸಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರದೇಶ : ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಯುವ ಸಮುದಾಯ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದರು.

ಭಾರತ್ ಜೋಡೋ ನ್ಯಾಯ ಯಾತ್ರೆ ಮಧ್ಯಪ್ರದೇಶದ ಶಾಜಾಪುರ ತಲುಪಿದ್ದು, ಅಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ವಿರುದ್ದ ರಾಹುಲ್ ವಾಗ್ದಾಳಿ ನಡೆಸಿದರು.

ದೇಶದ ಯುವ ಸಮುದಾಯವನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ದಾರಿ ತಪ್ಪಿಸುತ್ತಿದೆ. ದೇಶದಲ್ಲಿ ಸಾಮಾಜಿಕ ನ್ಯಾಯ ಸಾಧಿಸಬೇಕು ಎಂದಾದರೆ ದೇಶಾದ್ಯಂತ ಜಾತಿಗಣತಿ ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ ಎಲ್ಲಿ ಇತ್ತು?

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ನಮ್ಮದು. ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ ಪಕ್ಷ ಎಲ್ಲಿ ಅಸ್ತಿತ್ವದಲ್ಲಿ ಇತ್ತು? ಭಾರತದಲ್ಲಿ ಹಸಿರು ಕ್ರಾಂತಿ, ಡಿಜಿಟಲ್ ಕ್ರಾಂತಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷವು ಎಂದಿಗೂ ಕ್ರಾಂತಿಕಾರಿ ಕೆಲಸ ಕಾರ್ಯಗಳಿಂದ ಗಮನ ಸೆಳೆದಿದೆ. ಹಿಗಾಗಿ, ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ ನಡೆಯಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

RELATED ARTICLES

Related Articles

TRENDING ARTICLES