ಹಾವೇರಿ : ಮೊಹಮ್ಮದ್ ಶಫಿ ನಾಶಿಪುಡಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಯಾವ ರೀತಿ ನಂಟಿತ್ತು ಎಂಬುದರ ಬಗ್ಗೆಯೂ ಚರ್ಚೆಯಾಗಲಿ. ಈ ಬಗ್ಗೆ ತನಿಖೆ ಆಗಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದಲ್ಲೇ ಹೋಗಿ ಇರಲಿ. ಪಾಕಿಸ್ತಾನದಲ್ಲೇ ವ್ಯಾಪಾರ ಮಾಡಲಿ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗೇ ಇಲ್ಲ ಎಂದ ಕಾಂಗ್ರೆಸ್ ಸರ್ಕಾರದ ಸಚಿವವರು ಕೂಡಲೇ ರಾಜೀನಾಮೆ ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾಶಿಪುಡಿಗೆ ವಿದೇಶಗಳಿಂದ ಹಣ ಬರ್ತಾ ಇತ್ತು
ಸಚಿವ ಪ್ರಿಯಾಂಕ್ ಖರ್ಗೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ರಿಜ್ವಾನ್ ಅರ್ಷದ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ಬಂಧಿತ ಮೊಹಮ್ಮದ್ ಶಫಿ ನಾಶಿಪುಡಿಗೆ ವಿದೇಶಗಳಿಂದ ಹಣ ಬರ್ತಾ ಇತ್ತು ಅಂತ ಜನ ಮಾತನಾಡುತ್ತಿದ್ದಾರೆ. ಹೀಗಾಗಿ, ಮೊಹಮ್ಮದ್ ಶಫಿ ನಾಶಿಪುಡಿ ಬಗ್ಗೆ ಮತ್ತಷ್ಟು ತನಿಖೆ ಆಗಲಿ ಎಂದು ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದ್ದಾರೆ.