Tuesday, May 7, 2024

ಎರಡು ತಿಂಗಳ ಹಿಂದೆ ಬಿಜೆಪಿಯವರು ನಂಗೆ ಸಂಪರ್ಕ ಮಾಡಿದ್ದು ನಿಜ : ಬಿ.ಆರ್. ಪಾಟೀಲ್ ಹೊಸ ಬಾಂಬ್

ಕಲಬುರಗಿ : ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್​ ಸರ್ಕಾರ ಪತನವಾಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿ.ಆರ್. ಪಾಟೀಲ್ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಬಿಜೆಪಿಯವರು ನಂಗೆ ಸಂಪರ್ಕ ಮಾಡಿದ್ದು ನಿಜ. ಖುದ್ದು ನಂಗೆ ಆಫರ್ ಮಾಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಚುನಾವಣಾ ಖುರ್ಚು ನಾವೇ ನೋಡಿಕೊಳ್ಳುತ್ತೇವೆ. ಇನ್ನು ಬೇರೆ ಬೇರೆ ಆಫರ್​ಗಳನ್ನ ನೀಡಿದ್ದರು. ಅದೆನೆಲ್ಲಾ ನಾನು ತೀರಸ್ಕಾರ ಮಾಡಿದ್ದೇನೆ. ಅಲ್ಲದೇ ನಾನು ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ಮಾಹಿತಿ ನೀಡಿದ್ದೆ. ಬಿಜೆಪಿಯವರಿಗೆ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದು ರೂಢಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ಆಫರ್ ಮಾಡಿದೆ : ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ

ದಕ್ಷಿಣ ಭಾರತದಲ್ಲಿ ಬಿಜೆಪಿ ಬರೋಕೆ ನಾವು ಬಿಡೋದಿಲ್ಲ ಎನ್ನೋದು ಅವರಿಗೆ ಗೊತ್ತಾಗಿದೆ. ಅದಕ್ಕಾಗಿಯೇ ಬಿಜೆಪಿಗರಿಂದ ಇಂತಹ ಪ್ರಯತ್ನ ನಡೆಯುತ್ತಿದೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಯಾರು ಬಿಜೆಪಿಗೆ ಹೋಗುವುದಿಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES