Thursday, May 9, 2024

ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ

ಉಡುಪಿ: ಪಾಕ್ ಪರ ಘೋಷಣೆ ಕೂಗಿದ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ನ ಹಿನ್ನೆಲೆಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಯಾರ ಸಹಕಾರದಿಂದ ವಿಧಾನಸೌಧ ಪ್ರವೇಶಿಸಿದ್ದರು ತನಿಖೆಯಾಗಲಿ. ಘಟನೆಯಲ್ಲಿ ಮಾಧ್ಯಮದವರನ್ನು ಅವಹೇಳನ ಮಾಡಲಾಯಿತು. ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ. ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ. ನಾಸಿರ್ ಹುಸೇನ್ ಸದಸ್ಯತ್ವ ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Missile Attack: ಇಸ್ರೇಲ್​ನಲ್ಲಿ ಕ್ಷಿಪಣಿ ದಾಳಿ: ಕೇರಳ ಮೂಲದ ವ್ಯಕ್ತಿ ಸಾವು

ಬಂಧಿತರಾದ ಮೂರು ಜನರ ಹಿನ್ನೆಲೆಯನ್ನು ತನಿಖೆ ಮಾಡಬೇಕು. ಮೂವರ ಹಿಂದೆ ಯಾರಿದ್ದಾರೆ ಅವರ ಮೇಲೂ ಕ್ರಮ ಆಗಬೇಕು. ಕೇಂದ್ರ ಸರ್ಕಾರಕ್ಕೆ ಈಗಾಗಲೇ ನಾವು ಆಗ್ರಹ ಮಾಡಿದ್ದೇವೆ ಎಂದರು.

RELATED ARTICLES

Related Articles

TRENDING ARTICLES