Saturday, May 18, 2024

ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ಸಿದ್ಧತೆ: ರೈತರಿಂದ ಪ್ರೊಟೆಸ್ಟ್

ಮಂಡ್ಯ: ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಇದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲು ರೈತರ ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್‌ಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಹೌದು, ಇಂದಿನಿಂದ ನಾಲ್ಕ ದಿನಗಳ ಕಾಲ ಜಾರ್ಖಂಡ್‌ನ ವಿಜ್ಞಾನಿಗಳ ತಂಡದಿಂದ ಬ್ಲಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಿದ್ದು,ಟ್ರಯಲ್ ಬ್ಲಾಸ್ಟ್ ವಿರುದ್ಧ ಅನ್ನದಾತರು ರೊಚ್ಚಿಗೆದ್ದಿದ್ದಾರೆ.

ಇಂದು KRS ನಾರ್ಥ್ ಗೇಟ್ ಬಳಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ನೇತೃತ್ವದಲ್ಲಿ ಈ ಧರಣಿಯನ್ನು ಕೈಗೊಳ್ಳಲಾಗಿದೆ.

ಟ್ರಯಲ್ ಬ್ಲಾಸ್ಟ್ ಗೆ ಆಗಮಿಸಿರುವ ತಜ್ಞರ ವಿರುದ್ಧ ರೈತ ಸಂಘ, ವಿವಿಧ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನಾ ಸ್ಥಳಕ್ಕೆ ತಂಡೋಪ ತಂಡವಾಗಿ ರೈತರು ಆಗಮಿಸಿ ಗೋ ಬ್ಯಾಕ್ ಚಳುವಳಿ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES