Saturday, May 18, 2024

ಮಗುವನ್ನು ಅಪಹರಿಸಲು ಯತ್ನ: ಹಿಗ್ಗಾ ಮುಗ್ಗಾ ಥಳಿತ

ಆನೇಕಲ್ : ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನ ಅಪಹರಿಸಲು ಯತ್ನಸಿದ್ದಾನೆ ಎಂಬ ಆರೋಪದ ಹಿನ್ನೆಲೆ ಯುವಕನನ್ನು ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ರಾಯಕೋಟೆ ಸಮೀಪದ ಮಾದೇಪಟ್ಟಿ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಯುವಕ ಹಲ್ಲೆಗೊಳಗಾದ ವ್ಯಕ್ತಿ, ರಾಜ್ಯದ ಗಡಿಭಾಗ ತಮಿಳುನಾಡಿನ ಮಾದೇಪಟ್ಟಿ ಗ್ರಾಮಕ್ಕೆ ಬಂದ ಯುವಕ, ಗ್ರಾಮದ ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಿದ ಜನರು ಯುವಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಗ್ರಾಮದ ರಸ್ತೆಗಳಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮದ ಕುರಿತು ಹೇಳಿಕೆ : ಉದಯನಿಧಿ ಸ್ಟಾಲಿನ್​ಗೆ ಬಿಗ್ ರಿಲೀಫ್​

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕೃಷ್ಣಗಿರಿ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ನೂರಾರು ಮಂದಿ ಜಮಾವಣೆಯಾಗಿದ್ದ ಹಿನ್ನೆಲೆ ಪೊಲೀಸರ ಮುಂದೆಯೇ ಯುವಕನನ್ನು ಥಳಿಸಿದ್ದಾರೆ, ಇನ್ನು ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES