Saturday, April 27, 2024

ಬಿಜೆಪಿ ಕಾರ್ಯಕರ್ತನ ಕೇಸ್ ರೀ ಓಪನ್ ಮಾಡ್ತೀವಿ : ಸಿದ್ದರಾಮಯ್ಯ

ಬೆಳಗಾವಿ : ಮಂಡ್ಯ ಬಿಜೆಪಿ ಕಾರ್ಯಕರ್ತನ ಪ್ರಕರಣವನ್ನು ನಾವು ಮತ್ತೆ ರೀ ಓಪನ್ ಮಾಡುತ್ತೇವೆ. ದೇಶ ವಿರೋಧಿ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2022ರಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಬಿಜೆಪಿಯವರು ಮುಚ್ಚು ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಬೇಕು ಅಲ್ಲವೇ? ಎಂದು ಹರಿಹಾಯ್ದಿದ್ದಾರೆ.

ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ

ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ, ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಸಿದ್ದರಾಮಯ್ಯ ಕರೆ ಕೊಟ್ಟರು.

ಪ್ರಧಾನಿ ಮೋದಿ ರೈತರಿಗೆ ಸುಳ್ಳು ಹೇಳ್ತಾರೆ

ಬಿಜೆಪಿಯ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸುಳ್ಳು ಹೇಳ್ತಾರೆ. ರೈತರಿಗೆ ಸ್ಪಂದಿಸುವ ಕೆಲಸ ಅವರು ಮಾಡುವುದಿಲ್ಲ. ಎರಡು ಲಕ್ಷ ಕೃಷಿ ಹೊಂಡ ನಾನು ತೋಡಿಸಿಕೊಟ್ಟಿದ್ದೆ. ಇವರು ಬಂದು ಅದನ್ನ ನಿಲ್ಲಿಸಿ ಬಿಟ್ಟರು. ಮತ್ತೆ ಈ ವರ್ಷ ಎರಡನೂರು ಕೋಟಿ ರೂಪಾಯಿ ಕೊಟ್ಟು ಕೃಷಿ ಭಾಗ್ಯ ಕಾರ್ಯಕ್ರಮ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES