Thursday, May 2, 2024

ಬಾಂಬರ್ ಮಾಹಿತಿ ಕೊಟ್ಟರೆ 10 ಲಕ್ಷ ಬಹುಮಾನ : NIA ಘೋಷಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ಎನ್​ಐಎ ತಂಡ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಶಂಕಿತ ಆರೋಪಿ ಬಗ್ಗೆ ಮಾಹಿತಿ ನೀಡಿದವರ ಗುರುತನ್ನು (ಮಾಹಿತಿ) ಗೌಪ್ಯವಾಗಿ ಇಡಲಾಗುವುದು ಎಂದು ಎನ್​ಐಎ ಹೇಳಿದೆ. ಅಲ್ಲದೆ, ಬಾಂಬ್ ಸ್ಫೋಟಿಸಿದ ಶಂಕಿತ ಬಾಬರ್ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ.

ಇದೇ ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಇದೀಗ ತನಿಕೆ ಶುರು ಮಾಡಿರುವ ಎನ್​ಐಎ ಶಂಕಿತ ಉಗ್ರನಿಗೆ ಬಲೆ ಬೀಸಿದೆ.

ನಂಬರ್​ಗೆ ಮಾಹಿತಿ ನೀಡಿ

ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಈ ಫೋಟೋ ಸಿಸಿಬಿ ತನಿಖೆ ವೇಳೆ ಪತ್ತೆಯಾಗಿದೆ. ಆರೋಪಿ ಬಗ್ಗೆ ಮಾಹಿತಿ ಗೊತ್ತಿದ್ದರೆ ಕೂಡಲೇ ದೂ.ಸಂ. 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ.

RELATED ARTICLES

Related Articles

TRENDING ARTICLES