ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ ತಂಡ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ಶಂಕಿತ ಆರೋಪಿ ಬಗ್ಗೆ ಮಾಹಿತಿ ನೀಡಿದವರ ಗುರುತನ್ನು (ಮಾಹಿತಿ) ಗೌಪ್ಯವಾಗಿ ಇಡಲಾಗುವುದು ಎಂದು ಎನ್ಐಎ ಹೇಳಿದೆ. ಅಲ್ಲದೆ, ಬಾಂಬ್ ಸ್ಫೋಟಿಸಿದ ಶಂಕಿತ ಬಾಬರ್ ಫೋಟೋವನ್ನು ಎನ್ಐಎ ಬಿಡುಗಡೆ ಮಾಡಿದೆ.
ಇದೇ ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಇದೀಗ ತನಿಕೆ ಶುರು ಮಾಡಿರುವ ಎನ್ಐಎ ಶಂಕಿತ ಉಗ್ರನಿಗೆ ಬಲೆ ಬೀಸಿದೆ.
ಈ ನಂಬರ್ಗೆ ಮಾಹಿತಿ ನೀಡಿ
ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋವನ್ನು ಎನ್ಐಎ ಬಿಡುಗಡೆ ಮಾಡಿದೆ. ಈ ಫೋಟೋ ಸಿಸಿಬಿ ತನಿಖೆ ವೇಳೆ ಪತ್ತೆಯಾಗಿದೆ. ಆರೋಪಿ ಬಗ್ಗೆ ಮಾಹಿತಿ ಗೊತ್ತಿದ್ದರೆ ಕೂಡಲೇ ದೂ.ಸಂ. 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್ಐಎ ಮನವಿ ಮಾಡಿದೆ.
NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential. pic.twitter.com/F4kYophJFt
— NIA India (@NIA_India) March 6, 2024