Monday, May 20, 2024

ಲೋಕಸಭೆಯಲ್ಲಿ ಕಾಂಗ್ರೆಸ್​ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ: ಸಚಿವ ದಿನೇಶ ಗುಂಡೂರಾವ್

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನ ಈ ಬಾರಿ ಕಾಂಗ್ರೆಸ್ ಕೈ ಹಿಡಿತಾರೆ ಎನ್ನುವ ವಿಶ್ವಾಸ ಇದೆ.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ ಎಂದರು.

ನಮ್ಮ ಸರಕಾರ ಬಂದ ಮೇಲೆ ಕೊಟ್ಟ ಮಾತು ಈಡೇರಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳು, ಅಭಿವೃದ್ಧಿ ಕೆಲಸಗಳು ಜೋರಾಗಿ ನಡೆಯುತ್ತಿವೆ. ರಾಜ್ಯಕ್ಕೆ ಕೇಂದ್ರದಿಂದ ನಿರಂತರ ಅನ್ಯಾಯವಾಗುತ್ತಿದೆ.ಬರಗಾಲದಿಂದ ರಾಜ್ಯ ತತ್ತರಿಸಿದ್ದರೂ ಕೇಂದ್ರ ಸರಕಾರ ನಮಗೆ ಬಿಡಿಗಾಸು ಬಿಡುಗಡೆ ಮಾಡಿಲ್ಲ.ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಹಣ ಕೊಡುವ ರಾಜ್ಯಗಳಲ್ಲಿ ನಮ್ಮದೂ ಒಂದು.ನಮ್ಮ ಸಂಕಷ್ಟಕ್ಕೆ ಬರಲು ರೆಡಿ ಕೇಂದ್ರ ಇಲ್ಲ.ಕೇಂದ್ರ ಸರಕಾರ ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ.ಏಕೆ ರಾಜ್ಯಕ್ಕೆ ನೆರವು ಕೊಡುತ್ತಿಲ್ಲ ಏಕೆ ಅನ್ಯಾಯ ಆಗುತ್ತಿದೆ? ಸರಿಪಡಿಸಬೇಕಾದ ಬಿಜೆಪಿ ಸಂಸದರು ಮೌನವಾಗಿದ್ದಾರೆ.

ಇದನ್ನೂ ಓದಿ: ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆ ಪಾದಯಾತ್ರೆ

ಬಿಜೆಪಿ ಸಂಸದರು ಕಿಂಚಿತ್ತೂ ಸಹಾಯ ಮಾಡಿಲ್ಲ.ಈ ಎಲ್ಲಾ ಕಾರಣದಿಂದಾಗಿ ನಾವು 20 ಕ್ಕಿಂತ ಹೆಚ್ಚು ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿದಿದ್ದಾರೆ.

ಜೆಡಿಎಸ್ – ಬಿಜೆಪಿ ಮೈತ್ರಿಯಿಂದ ಏನೂ ಪ್ರಯೋಜನ ಆಗದು.ಕಳೆದ ಬಾರಿ ನಾವು ಜೆಡಿಎಸ್ ಜೊತೆ ಮೈತ್ರಿಯಾಗಿದ್ದೇವೆ. ಆಗಲೇ ನಮಗೆ ಯಾವತ್ತೂ ಬರದ ಪರಿಸ್ಥಿತಿ ಬಂದಿತ್ತು. ಬಿಜೆಪಿಗೂ ಇದೆ ಪರಿಸ್ಥಿತಿ ಬರುತ್ತದೆ. ಸೋಲಿನ ಭಯ ಬಿಜೆಪಿಗೆ ಕಾಡುತ್ತಿದೆ.‌ ಆದಕ್ಕಾಗಿಯೇ ಮೈತ್ರಿ ಮಾಡ್ಕೋಂಡಿದಾರೆ. ಆದ್ರೆ ಇವರ ಮೈತ್ರಿ ಲೆಕ್ಕಕ್ಕಿಲ್ಲ ಅತಿ ಹೆಚ್ಚು ಸ್ಥಾನ ಗೆಲ್ಲೋದು ನಾವೇ ಎಂದರು.

RELATED ARTICLES

Related Articles

TRENDING ARTICLES