Monday, May 20, 2024

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಶಂಕಿತ ಉಗ್ರನಿಗಾಗಿ ತುಮಕೂರಿನಲ್ಲಿ ಹುಡುಕಾಟ

ತುಮಕೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತುಮಕೂರಿನಲ್ಲಿ ಶಂಕಿತ ಭಯೋತ್ಪಾದಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಶಂಕಿತ ಬಾಂಬರ್ ಮಾರ್ಚ್​1ರಂದು ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ತುಮಕೂರಿನ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಸುಮಾರು 28 ವಾಹನಗಳಲ್ಲಿ ತುಮಕೂರಿಗೆ ಆಗಮಿಸಿರುವ ಪೊಲೀಸರು, ರೈಲ್ವೆ ನಿಲ್ದಾಣ, ಪಾಲಿಕೆ ಕಚೇರಿ, ಪೊಲೀಸ್ ಕಂಟ್ರೋಲ್ ರೂಂ ಸೇರಿ ನಗರದ ಹಲವೆಡೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನು ಬೆಂಗಳೂರು ಪೊಲೀಸರಿಗೆ ತುಮಕೂರು ಎಸ್‌ಪಿ ಕೆ.ವಿ.ಅಶೋಕ್, ಡಿವೈ‌ಎಸ್‌ಪಿ ಚಂದ್ರಶೇಖರ್ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಬಾಂಬ್ ಇಟ್ಟವನಿಗಾಗಿ ಸಿಸಿಬಿ ಮತ್ತು ಎನ್‌ಐಎ ಪೊಲೀಸರು ಮ್ಯಾಪಿಂಗ್ ಮಾಡಿದ್ದು, ಎಲ್ಲಿಂದ ಬಂದ, ಎಲ್ಲಿಗೆ ಹೋದ ಅನ್ನೋ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪೂರ್ತಿ ಮುಖದ ಫೋಟೋಗಾಗಿ ಸಿಸಿಕ್ಯಾಮರಾಗಳನ್ನ ಜಾಲಾಡ್ತಿದ್ದಾರೆ.

RELATED ARTICLES

Related Articles

TRENDING ARTICLES