Sunday, May 12, 2024

ವಯಸ್ಸು, ಆರೋಗ್ಯ ಕಾರಣದಿಂದ ಕೆಲವರಿಗೆ ಟಿಕೆಟ್ ಕೊಡಲ್ಲ : ಆರ್. ಅಶೋಕ್

ಬೆಂಗಳೂರು : ವಯಸ್ಸು ಹಾಗೂ ಆರೋಗ್ಯ ಕಾರಣದಿಂದ ಕೆಲವರಿಗೆ ಟಿಕೆಟ್ ಕೊಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಟಿಕೆಟ್ ಬಗ್ಗೆ ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದೆ. ಉಳಿದ್ದಿದ್ದು ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ ಎಂದರು.

ಹೈಕಮಾಂಡ್ ನಾಯಕರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ತೀರ್ಮಾನ ತಗೋತಾರೆ. ಯಾರಿಗೆ ಟಿಕೆಟ್? ಯಾರಿಗೆ ಇಲ್ಲ ಅನ್ನೋದು ಮುಖ್ಯ ಅಲ್ಲ. ಯಾರಿಗೇ ಕೊಟ್ಟರೂ ಕೆಲಸ ಮಾಡ್ತೀವಿ. ಬಿಜೆಪಿ ಗೆಲ್ಲಬೇಕು ಮತ್ತೆ ಮೋದಿ ಪ್ರಧಾನಿ ಆಗಬೇಕು. ಈ ಬಾರಿಯೂ ಅಚ್ಚರಿ ಮತ್ತು ಹೊಸ‌ಮುಖಗಳಿಗೆ ಟಿಕೆಟ್ ಸಿಗಬಹುದು ಎಂದು ತಿಳಿಸಿದರು.

ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತಗೊಂಡಿದ್ದಾರೆ

ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಯಿತು. ದೆಹಲಿಗೆ ನಮ್ಮನ್ನ ನಮ್ಮ ರಾಷ್ಟ್ರೀಯ ನಾಯಕರು ಕರೆದಿದ್ದರು. ರಾಜ್ಯ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ಜೆ.ಪಿ. ನಡ್ಡಾ, ಸಂತೋಷ್ ಅವರ ಜತೆ ಚರ್ಚೆ ಆಗಿದೆ. ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತಗೊಂಡಿದ್ದಾರೆ ಎಂದು ಆರ್. ಅಶೋಕ್ ಹೇಳಿದರು.

RELATED ARTICLES

Related Articles

TRENDING ARTICLES