Thursday, May 9, 2024

ಆರೋಪಿಗೆ ನಾಸೀರ್ ಹುಸೇನ್ ಆಶೀರ್ವಾದ ಇದೆ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ‌ ಕೂಗಿದ ಆರೋಪಿಗೆ ಸಯ್ಯದ್ ನಾಸೀರ್ ಹುಸೇನ್ ಆಶೀರ್ವಾದ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ‌ ಕೂಗಿದವನು ಕಾಂಗ್ರೆಸ್ ಪಾರ್ಟಿಗೆ ಹತ್ತಿರ ಇದ್ದಾನೆ. ನಾಸಿರ್ ಹುಸೇನ್ ಕನಿಷ್ಠ ಪಕ್ಷ ಕ್ಷಮೆ‌ ಕೇಳಬೇಕು, ಕಾಂಗ್ರೆಸ್‌ನವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಆರೋಪಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಜೊತೆಗೆ ಫೋಟೋದಲ್ಲಿ ಇದ್ದಾನೆ. ಒಳಗೊಳಗೆ ಪುಷ್ಟೀಕರಣಕ್ಕೆ ತಲೆ‌ಮೇಲೆ ಕೂರಿಸಿಕೊಂಡು, ಅಪ್ಪಿ ಮುದ್ದಾಡುತ್ತಾರೆ. ನಾಸಿರ್‌ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು,‌ ಅಲ್ಲಿವರೆಗೆ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಒತ್ತಾಯಿಸಿದರು.

ಹಳಬರಿಗೆ ಟಿಕೆಟ್ ಇಲ್ಲ, ಹೊಸಬರಿಗೆ ಅವಕಾಶ

ಲೋಕಸಭಾ ಟಿಕೆಟ್ ಹಂಚಿಕೆ ಬಗ್ಗೆ ಎಲ್ಲವೂ ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಅದಕ್ಕೆ ಉತ್ತರ ಕೊಡಲ್ಲ. ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡ್ತಾರೆ ಅನ್ನೋದು ಊಹಾಪೋಹ. ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ ಎಂದು ಪರೋಕ್ಷವಾಗಿ ತನಗೆ ಟಿಕೆಟ್ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರದ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ

ಬೆಂಗಳೂರಿನ ರಾಮೇಶ್ಚರಂ ಕೆಫೆ ಸ್ಫೋಟದ ಬಗ್ಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ. ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ಆರೋಪ ಮಾಡಿದರು.

RELATED ARTICLES

Related Articles

TRENDING ARTICLES