Saturday, May 4, 2024

ನಮ್ಮ ತ್ಯಾಗಕ್ಕೆ BJP ಸರ್ಕಾರ ಬಂತು.. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ : ಬಿ.ಸಿ. ಪಾಟೀಲ್

ಹಾವೇರಿ : ನಮ್ಮ ತ್ಯಾಗಕ್ಕೆ ಬಿಜೆಪಿ ಸರ್ಕಾರ ಬಂತು.. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಹಿರೇಕೇರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ-ಗದಗದವರೇ ಆಗಬೇಕಲ್ವಾ? ನಾನು ಎಲ್ಲಾ ಹೇಳಿದರೆ ನಿಮಗೆ ರುಚಿ ಉಳಿಯಲ್ಲ. ನಾನು ಎಚ್ಚರಿಕೆ ಕೊಡ್ತಾ ಇಲ್ಲ‌ ಎಂದು ತಿಳಿಸಿದರು.

ನನಗೆ ಕೊಡಬೇಕು ಅಂತ ಡಿಮ್ಯಾಂಡ್ ಮಾಡ್ತಾ ಇದ್ದೇನೆ. ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ನಾವು ತ್ಯಾಗ ಮಾಡಿದ್ದೀವಿ. ನಮಗೆ ಟಿಕೆಟ್ ಕೊಡೋದ್ರಲ್ಲಿ ನ್ಯಾಯ ಇದೆ. ನಮ್ಮ ತ್ಯಾಗಕ್ಕೆ ಬಿಜೆಪಿ ಸರ್ಕಾರ ಬಂತು ಎಂದು ಹಳೆ ವಿಷಯ ಕೆದಕಿದರು.

ನಾವೆಲ್ಲಾ ಸೋತಿದ್ದೇವೆ, ನಮ್ಮ ಹಿತ ಕಾಯಲಿ

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋತಿತು? ಎಲ್ಲರಿಗೂ ಗೊತ್ತು, ನಾವೆಲ್ಲಾ ಸೋತಿದ್ದೇವೆ. ನಮ್ಮ ಹಿತವನ್ನೂ ಅವರು ಕಾಯಲಿ, ಅದರ ಜವಾಬ್ದಾರಿ ಅವರಿಗೆ ಇದೆ ಅಲ್ವಾ‌‌..? ನಮಗೆ ಹೆದರಿಸೋದು, ಬೆದರಿಸೋದು ಗೊತ್ತಿಲ್ಲ. ಮೌನವಾಗಿದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಲ್ಲ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ದವೇ ಗುಟುರು ಹಾಕಿದರು.

ಕಾಂತೇಶ್​ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡ್ತೀನಿ

ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರೋದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಡಿಯೂರಪ್ಪನವರೇ ಆ ಮಾತು ಹೇಳಬೇಕಲ್ವಾ? ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತೆ. ನಮಗೆ ಯಾವ ರೀತಿನೂ ಯಡಿಯೂರಪ್ಪ ಹೇಳಿಲ್ಲ. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಅಂತ ಕೇಳಿದಿನಿ. ಕಾಂತೇಶ್​ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡುತ್ತೇನೆ ಎಂದು ಬಿ.ಸಿ. ಪಾಟೀಲ್ ಎಚ್ಚರಿಕೆಯ ಸಂದೇಶ ರವಾನಿಸಿದರು.

RELATED ARTICLES

Related Articles

TRENDING ARTICLES