ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜನರು ಕಾಂಗ್ರೆಸ್ ಕೈ ಹಿಡಿದಂತೆ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವಂತೆ ಮಾಡಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಎಂದೇ ಖ್ಯಾತಿ ಗಳಿಸಿರುವ ವೆಂಕಟರಮಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯ ಜಿಲ್ಲೆ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೆಪಿಸಿಸಿಗೆ ಶಿಫಾರಸು ಮಾಡಿದ್ದರು. ಹಾಗಾಗಿ ಹೈಕಮಾಂಡ್ ನನ್ನನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಅದಕ್ಕೆ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಮಂಡ್ಯ ಜಿಲ್ಲೆ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ರಂಜಾನ್ಗೆ ಶಾಲಾ ಸಮಯ ಬದಲಾವಣೆ
ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಲೋಕಸಭಾ ಚುನಾವಣೆಯ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಕರ್ನಾಟಕದಿಂದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು ಈ ಪಟ್ಟಿಯಲ್ಲಿ ಮಂಡ್ಯ ಕ್ಷೇತ್ರದಿಂದ (ಸ್ಟಾರ್ ಚಂದ್ರು) ವೆಂಕಟರಮಣೇಗೌಡ ಅವರ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ.