Friday, May 3, 2024

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಬಾಸ್​ ದರ್ಶನ್​

ಬೆಂಗಳೂರು : ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಕೊರಗಜ್ಜ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದರ್ಶನ್ ಜತೆ ನಟ ಚಿಕ್ಕಣ್ಣ ನಟ ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದಾರೆ.

ಈಗಾಗಲೇ ಹಲವಾರು ಸ್ಯಾಂಡಲ್‌ವುಡ್‌ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್‌ ಸೇರಿದ್ದಾರೆ. ದರ್ಶನ್‌ ಭೇಟಿ ನೀಡಿದ್ದ ವೇಳೆ, ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ ಪ್ರತಿಕ್ರಿಸಿ, “ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಹಿಂದೆ ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದಿದ್ದೀನಿ. ಇಲ್ಲಿಗೆ ಇಂದು ಬಂದಿರುವುದಕ್ಕೆ ಬೇರೆ ಯಾವುದೇ ಕಾರಣ ಇಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅನ್ನ ಚೆಲ್ಲದಂತೆ ಸಿದ್ಧಗಂಗಾ ಮಠದ ಮಕ್ಕಳ ಪಾಠ: ಮಕ್ಕಳ ಕಾರ್ಯಕ್ಕೆ ಶ್ಲಾಘನೆ!

ದರ್ಶನ್‌ ಅಭಿನಯದ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಮಿಲನಾ ಪ್ರಕಾಶ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ‘ತಾರಕ್’ ಬಳಿಕ ದರ್ಶನ್- ಪ್ರಕಾಶ್ ಜೋಡಿಯ ಎರಡನೇ ಸಿನಿಮಾ ಇದು. ದರ್ಶನ್‌ ಕೂಡ ರಗಡ್‌ ಆಗಿ ಕಂಡಿದ್ದಾರೆ. ಡೆವಿಲ್’ ಚಿತ್ರಕ್ಕೆ ಕೆಲವು ತಿಂಗಳ ಹಿಂದೆ ಸ್ಕ್ರಿಪ್ಟ್ ಪೂಜೆ ನಡೆದಿತ್ತು. ಕೆಲವು ಎಡಿಟ್ ಮಾಡಿದ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದು ‘ಡೆವಿಲ್’ ಚಿತ್ರದ ಪೋಸ್ಟರ್ ಎಂದು ಹೇಳಲಾಗಿತ್ತು.

RELATED ARTICLES

Related Articles

TRENDING ARTICLES