ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ನೀವು ದೆಹಲಿಗೆ ಬನ್ನಿ ಅಮಿತಾ ಶಾ ಅವರೊಂದಿಗೆ ಮಾತುಕತೆ ನಡೆಸೋಣ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ಧಾರೆ.
ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ, ಕಾಂತೇಶ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ, ಕಾಂತೇಶ್ಗೆ ಟಿಕೆಟ್ ಕೊಡಿಸುವ ಬಗ್ಗೆ ನಾನು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ದಯವಿಟ್ಟು ಈಶ್ವರಪ್ಪ ಅವರಿಗೆ ದೆಹಲಿಗೆ ಬರುವುದಕ್ಕೆ ಹೇಳಿ. ಅವರು ಅಲ್ಲಿಗೆ ಬಂದರೆ ಗೃಹ ಸಚಿವ ಅಮಿತ್ ಶಾ ಜತೆ ಮನವಿ ಮಾಡಿಕೊಳ್ಳಲು ಅನುಕೂಲ ಆಗುತ್ತದೆ.
ಈಶ್ವರಪ್ಪ ಅವರ ಜತೆಗೆ ನಾನು ಇರುತ್ತೇನೆ. ನಿನ್ನೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಈಶ್ವರಪ್ಪ ಭೇಟಿ ಮಾಡಿದ್ದಾರೆ. ನಾನೇ ಅಲ್ಲಿಗೆ ಅವರನ್ನು ಕಳಿಸಿದ್ದೆ. ಈಶ್ವರಪ್ಪ ಬೇರೆ ಅಲ್ಲ, ನಾನು ಬೇರೆ ಅಲ್ಲ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದರು.
ಹಾವೇರಿಗಾಗಿ ಪೈಪೋಟಿ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿಯ ಬಿಸಿ ಪಾಟೀಲ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಇನ್ನು ಮಾಜಿ ಸಚಿವ ಬಿಸಿ ಪಾಟೀಲ್ ಟಿಕೆಟ್ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.