ಉತ್ತರ ಪ್ರದೇಶ : ಬಸ್ ಮೇಲೆ 11,000 ವೋಲ್ಟ್ ಕರೆಂಟ್ ವೈರ್ ಬಿದ್ದು ಮದುವೆಗೆ ಹೊರವರು ಮಸಣ ಸೇರಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಇಲ್ಲಿನ ಮರ್ದಾಹ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ. ಬಸ್ ಸ್ಥಳದಲ್ಲೇ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ.
ಒಟ್ಟು 36 ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಘಟನಾ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದದ್ದು ಹೇಗೆ?
ಅಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. 36 ಜನ ಅತಿಥಿಗಳನ್ನು ಬಸ್ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಸಂತೋಷವೇ ತುಂಬಿದ್ದ ಈ ವೇಳೆ 11,000 ವೋಲ್ಟ್ನ ಹೈಟೆನ್ಷನ್ ಕರೆಂಟ್ ವೈರ್ ಬಸ್ ಮೇಲೆ ಬಿದ್ದಿದೆ. ಕೂಡಲೇ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಭಾರಿ ಪ್ರಮಾಣದ ವಿದ್ಯುತ್ ಪ್ರವಹಿಸುತ್ತಿದ್ದರಿಂದ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.
पल भर में मातम में तब्दील हो गईं खुशियां!#गाजीपुर में बारात ले जा रही बस पर हाईटेंशन तार गिरने से बनी आग का गोला…दो दर्जन से अधिक लोगों की दर्दनाक मौत की सूचना…भयावह हादसा देख खड़े हो गए रोंगटे!!#viralvideo #UP pic.twitter.com/DAWkFeSI4K
— Ramashray Yadav (@Yadav47404) March 11, 2024