ಚಿತ್ರದುರ್ಗ : ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಕ್ಸಮರ ನಡೆಸುತ್ತಿದ್ದಾರೆ. ಇಲ್ಲೊಬ್ಬ ಕಾಂಗ್ರೆಸ್ ನಾಯಕ ಪ್ರಧಾನಿ ಮೋದಿಗೆ ಏಕವಚನದಲ್ಲೇ ಬೈದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ನನ್ನ ಕೈಗೆ ಸಿಕ್ಕರೆ ನನ್ನ ಕಾಲಲ್ಲಿರೋದು ತೆಗೆದು ಹೊಡೀತಿನಿ ಎಂದು ಕಾರ್ಮಿಕರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ಹೇಳಿದ್ದಾರೆ. ಸಚಿವ ಡಿ. ಸುಧಾಕರ್ ಹಾಗೂ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಸಮ್ಮುಖದಲ್ಲೇ ಈ ರೀತಿ ಹೇಳಿಕೆ ನೀಡಿದ್ದಾರೆ.
ಹಿರಿಯೂರಿನಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್, ಬಾಬು ಜಗಜೀನವರಾಂ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪದಲ್ಲೇ ಸಿಲಿಂಡರ್ ಬೆಲೆ 100 ರೂ. ಕಡಿಮೆ ಮಾಡಿದ್ದಾರೆ. ಈಗ ಯಾಕಲೇ ಮಾಡ್ತಿಯಾ? ಎಂದು ಏಕ ವಚನದಲ್ಲೇ ಹರಿಹಾಯ್ದಿದ್ದಾರೆ.
ಸಿಲಿಂಡರ್ ದರ 1,400 ಮಾಡ್ತೀಯಾ?
ಇಷ್ಟು ದಿನ 95 ಸಾವಿರ, ಒಂದು ಲಕ್ಷ ಮುಖಕ್ಕೆ ಹೊಡೆದು ಕಿತ್ಕೊಂಡ. ಈಗ 100 ಫ್ರೀ ಅಂತಿದ್ದಾನೆ. 465 ರೂ. ಇದ್ದ ಸಿಲಿಂಡರ್ ಬೆಲೆ 1,200 ರೂ. ಯಾಕೆ ಮಾಡ್ದೆ? ಚುನಾವಣೆ ಆದ್ಮೇಲೆ ಸಿಲಿಂಡರ್ ದರ 1,400 ರೂ. ಮಾಡ್ತೀಯಾ? ಲಕ್ಷ ನಮ್ಮಿಂದ ದೋಚಿ, 100 ರೂ. ಸಿಲಿಂಡರ್ ರೇಟ್ ಕಡಿಮೆ ಮಾಡಿದ್ದಾರೆ ಎಂದು ಜಿ.ಎಸ್ ಮಂಜುನಾಥ್ ಕಿಡಿಕಾರಿದ್ದಾರೆ.