Saturday, May 18, 2024

ನಮ್ಮ ಶಾಸಕರಿಗೆ BJP ತಲಾ 50 ಕೋಟಿ ಆಫರ್ ಮಾಡಿದೆ : ಡಿಕೆಶಿ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್​ ಶಾಸಕರಿಗೆ ಬಿಜೆಪಿಯವರು ತಲಾ 50 ಕೋಟಿ ಆಫರ್ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ ಶಾಸಕರಿಗೆ ತಲಾ 50 ಕೋಟಿ ನೀಡಿ ಸರ್ಕಾರ ಬೀಳಿಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನೂ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಆದರೆ, ಬಿಜೆಪಿಗರ ಯಾವ ತಂತ್ರವೂ ಸಾಧ್ಯವಾಗಿಲ್ಲ. ಇಂತಹ ನೀತಿಗೆಟ್ಟ ರಾಜಕಾರಣ ಕಂಡು ಅಸಹ್ಯವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಇಂದು ಕರ್ನಾಟಕದ ಅಭ್ಯರ್ಥಿಗಳ ಹೆಸರು ಫೈನಲ್ ಆಗುತ್ತೆ : ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ

ಸರ್ಕಾರ ಬೀಳಿಸಲು ತಿರುಕನ ಕನಸು

ಯಾಡಿಯೂರಪ್ಪನವರೇ, ನಿಮ್ಮ ಪಕ್ಷದ ನಾಯಕರು ಕಾಂಗ್ರೆಸ್​ ಸರ್ಕಾರ ಬೀಳಿಸಲು ತಿರುಕನ ಕನಸು ಕಾಣುತ್ತಿದ್ದಾರೆ. ನಾವು 135 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಮೂವರು ಪಕ್ಷೇತರ ಶಾಸಕರು ನಮಗೆ ಬೆಂಬಲ ಸೂಚಿಸಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸಲು ಬಿಜೆಪಿ ನಾಯಕರಿಂದ ಸಾಧ್ಯವೇ ಇಲ್ಲ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES