ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ತಲಾ 50 ಕೋಟಿ ಆಫರ್ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ನೀಡಿ ಸರ್ಕಾರ ಬೀಳಿಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನೂ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಆದರೆ, ಬಿಜೆಪಿಗರ ಯಾವ ತಂತ್ರವೂ ಸಾಧ್ಯವಾಗಿಲ್ಲ. ಇಂತಹ ನೀತಿಗೆಟ್ಟ ರಾಜಕಾರಣ ಕಂಡು ಅಸಹ್ಯವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಇಂದು ಕರ್ನಾಟಕದ ಅಭ್ಯರ್ಥಿಗಳ ಹೆಸರು ಫೈನಲ್ ಆಗುತ್ತೆ : ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ
ಸರ್ಕಾರ ಬೀಳಿಸಲು ತಿರುಕನ ಕನಸು
ಯಾಡಿಯೂರಪ್ಪನವರೇ, ನಿಮ್ಮ ಪಕ್ಷದ ನಾಯಕರು ಕಾಂಗ್ರೆಸ್ ಸರ್ಕಾರ ಬೀಳಿಸಲು ತಿರುಕನ ಕನಸು ಕಾಣುತ್ತಿದ್ದಾರೆ. ನಾವು 135 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಮೂವರು ಪಕ್ಷೇತರ ಶಾಸಕರು ನಮಗೆ ಬೆಂಬಲ ಸೂಚಿಸಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸಲು ಬಿಜೆಪಿ ನಾಯಕರಿಂದ ಸಾಧ್ಯವೇ ಇಲ್ಲ ಎಂದು ಕುಟುಕಿದ್ದಾರೆ.