Friday, May 17, 2024

ಯದುವೀರ್​ಗೆ ಟಿಕೆಟ್ ಕೊಟ್ರೆ, ಕಾರ್ಯಕರ್ತನಾಗಿ ಅವ್ರ ಪರ ಕೆಲಸ ಮಾಡ್ತೀನಿ : ಪ್ರತಾಪ್ ಸಿಂಹ

ಮೈಸೂರು : ಯದುವೀರ್ ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡ್ತೀನಿ ಎಂದು ಸಂಸದ ಪ್ರತಾಪ್ ಸಿಂಹ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಕೊಡಗು ಅಭಿವೃದ್ಧಿಗೆ ಅತಿ ಹೆಚ್ಚಿನ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ? ಎಂದು ಪ್ರಶ್ನಿಸಿದರು.

ನನಗೆ ಪಕ್ಷ ನಿಷ್ಠೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೇ ದುಡಿಯುತ್ತೇನೆ. ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನನ್ನ ಭೇಟಿ ಮಾಡಲು ಕರೆದಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿಗೆ ತೆರಳುತ್ತೇನೆ ಎಂದು ತಿಳಿಸಿದರು.

ನನ್ನನ್ನು ಯಾರಿಗೂ ಮ್ಯಾಚ್ ಮಾಕೋಕೆ ಆಗಲ್ಲ

ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ನನ್ನಷ್ಟು ಹಿಂದುತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದುತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಯಾರಿಗೂ ಆಗಲ್ಲ. ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ, ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ? ಎಂದು ಪ್ರತಾಪ್ ಸಿಂಹ ಹೇಳಿದರು.

RELATED ARTICLES

Related Articles

TRENDING ARTICLES