Friday, May 17, 2024

ಅರಮನೆ ಎಸಿ ರೂಂ ಬಿಟ್ಟು ಬಂದ್ರೆ ಸ್ವಾಗತ : ಯದುವೀರ್​ಗೆ ಟಾಂಗ್ ಕೊಟ್ರಾ ಪ್ರತಾಪ್ ಸಿಂಹ

ಮೈಸೂರು : ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು, ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೇ ಇರುವುದಕ್ಕೆ ಆಗುತ್ತಾ? ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ ಹಾಗೂ ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.

ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ. ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ  ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದ್ರೆ ಆ ಸಮಸ್ಯೆ ಬಗೆಹರಿಯುತ್ತೆ ಎಂದು ತಿಳಿಸಿದರು.

ಹೋರಾಡಲು ಬೀದಿಗೆ ಬಂದರೆ ಸಂತೋಷ

ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ.  ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಅರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ದ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.

ಅರಮನೆ ವೈಭೋಗ ಬೇಕಾಗಿಲ್ಲ ಅಂದ್ರೆ ಸ್ವಾಗತ

ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತ ಹೊರಟಿದ್ದಾರೆ. ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ? ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಸ್ವಪಕ್ಷದ ವಿರುದ್ಧವೇ ಗುಡುಗಿದರು.

RELATED ARTICLES

Related Articles

TRENDING ARTICLES