ಚಾಮರಾಜನಗರ : ತಾನು ಸಂಸದ ಆದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಚಾಮರಾಜನಗರ ಜಿಲ್ಲೆ ಹೆಗ್ಗವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಎರಡು ಬಾರಿ ಪ್ರತಾಪ್ ಸಿಂಹ ಎಂಪಿ ಆಗಿದ್ದಾರಲ್ಲ.. ಎಲ್ಲಿ ನನ್ನ ಕುರ್ಚಿ ಅಲುಗಾಡಲೇ ಇಲ್ಲ ಎಂದು ಕುಟುಕಿದರು.
ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು. ಇದರ ಬಗ್ಗೆ ನನಗೆ ಗೊತ್ತಿಲ್ಲ. ಮಾಧ್ಯಮವರು ಸೃಷ್ಟಿ ಮಾಡಿಕೊಂಡು.. ಯದುವೀರ್ ಅಭ್ಯರ್ಥಿ, ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ? ಕ್ಯಾಂಡಿಡೇಟ್ ಯಾರದಾರೂ ಆಗಲಿ, ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? : ನಾನು ಗೆದ್ರೆ ಸಿದ್ರಾಮಯ್ಯ ಕುರ್ಚಿ ಅಲ್ಲಾಡುತ್ತೆ : ಪ್ರತಾಪ್ ಸಿಂಹ
ಧ್ರುವನಾರಾಯಣ್ ಪುಣ್ಯಸ್ಮರಣೆಯಲ್ಲಿ ಭಾಗಿ
ದಿ. ಆರ್ ಧ್ರುವನಾರಾಯಣ್ ಮೊದಲ ವರ್ಷದ ಪುಣ್ಯಸ್ಮರಣೆಯಲ್ಲಿ ಸಿದ್ದರಾಮಯ್ಯ ಭಾಗಿಯಾದರು. ಧ್ರುವನಾರಾಯಣ್ ಹುಟ್ಟೂರು ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಸಚಿವ ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಪುತ್ರ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.