Tuesday, May 21, 2024

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ!

ಹಾಸನ: ಹೆಜ್ಜೇನು ದಾಳಿಗೆ ರೈತನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಧರಸಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆನಂದ್ (45) ಮೃತ ದುರ್ದೈವಿ, ಧರಸಿಹಳ್ಳಿ ಗ್ರಾಮದ ಜಮೀನಿನಲ್ಲಿ ಮೃತ ಆನಂದ್​ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ, ನೂರಾರು ಹೆ್ಜ್ಜೇನು ಹುಳುಗಳು ಏಕಕಾಲದಲ್ಲಿ ದಾಳಿ ಮಾಡಿದೆ, ದಾಳಿಯಿಂದ ತಪ್ಪಿಸಿಕೊಳ್ಳಲು ಆನಂದ್ ಹರಸಾಹಸಪಟ್ಟರೂ ಬಿಡದೆ ಹೆಜ್ಜೇನು ದಾಳಿ ಮಾಡಿದೆ. ತೀವ್ರ ಅಸ್ವಸ್ತಗೊಂಡ ಆನಂದ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ; ಗಾಳಿ ಆಂಜನೇಯ ದೇವಾಲಯ ಆಡಳಿತ ಮಂಡಳಿ ಸದಸ್ಯರಿಂದ ಕಂತೆ ಕಂತೆ ಹುಂಡಿ ಹಣ ಕಳ್ಳತನ!

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES

Related Articles

TRENDING ARTICLES