ಹಾಸನ: ಹೆಜ್ಜೇನು ದಾಳಿಗೆ ರೈತನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಧರಸಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆನಂದ್ (45) ಮೃತ ದುರ್ದೈವಿ, ಧರಸಿಹಳ್ಳಿ ಗ್ರಾಮದ ಜಮೀನಿನಲ್ಲಿ ಮೃತ ಆನಂದ್ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ, ನೂರಾರು ಹೆ್ಜ್ಜೇನು ಹುಳುಗಳು ಏಕಕಾಲದಲ್ಲಿ ದಾಳಿ ಮಾಡಿದೆ, ದಾಳಿಯಿಂದ ತಪ್ಪಿಸಿಕೊಳ್ಳಲು ಆನಂದ್ ಹರಸಾಹಸಪಟ್ಟರೂ ಬಿಡದೆ ಹೆಜ್ಜೇನು ದಾಳಿ ಮಾಡಿದೆ. ತೀವ್ರ ಅಸ್ವಸ್ತಗೊಂಡ ಆನಂದ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ; ಗಾಳಿ ಆಂಜನೇಯ ದೇವಾಲಯ ಆಡಳಿತ ಮಂಡಳಿ ಸದಸ್ಯರಿಂದ ಕಂತೆ ಕಂತೆ ಹುಂಡಿ ಹಣ ಕಳ್ಳತನ!
ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.