ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ.ಕರ್ನಾಟಕ 20 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ನಿರೀಕ್ಷೆಯಂತೆ ಮೈಸೂರಿನಿಂದ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗಿದೆ. ಕರ್ನಾಟಕದ ಒಟ್ಟು 20 ಕ್ಷೇತ್ರಗಳಿಗೆ ಟಿಕೆಟ್ ಘೋಷನೆಯಾಗಿದೆ. ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಪ್ರತಾಪ್ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್ ಉದಾಸಿ, ಜಿಎಸ್ ಬಸವರಾಜು ಅವರಿಗೆ ಟಿಕೆಟ್ ತಪ್ಪಿದೆ.
ಯಾವ ಕ್ಷೇತ್ರದಿಂದ ಯಾರಿಗೆ ಟಿಕೆಟ್?
- ಬಿಜಾಪುರ- ರಮೇಶ್ ಜಿಗಜಿಣಗಿ
- ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
- ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
- ಕಲಬುರಗಿ- ಉಮೇಶ್ ಜಾಧವ್
- ಬೀದರ್- ಭಗವಂತ ಖೂಬಾ
- ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
- ಬಳ್ಳಾರಿ- ಶ್ರೀರಾಮುಲು
- ಹಾವೇರಿ- ಬಸವರಾಜ ಬೊಮ್ಮಾಯಿ
- ಧಾರವಾಡ- ಪ್ರಹ್ಲಾದ್ ಜೋಶಿ
- ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
- ಶಿವಮೊಗ್ಗ- ಬಿ.ವೈ. ರಾಘವೇಂದ್ರ
- ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
- ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
- ತುಮಕೂರು – ವಿ. ಸೋಮಣ್ಣ
- ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
- ಚಾಮರಾಜನಗರ- ಎಸ್. ಬಸವರಾಜು
- ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
- ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
- ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
- ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ