Sunday, April 28, 2024

ಕುಮಾರಸ್ವಾಮಿಗೆ ತಾಕತ್ತಿಲ್ವಾ? ಗಂಡಸ್ತನ ಇಲ್ವಾ? : ಶಾಸಕ ಇಕ್ಬಾಲ್ ಹುಸೇನ್

ರಾಮನಗರ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಆಗಿ ಡಾ. ಮಂಜುನಾಥ್ ಸ್ಪರ್ಧೆ ಮಾಡುತ್ತಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ‌ಮಂಜುನಾಥ್ ಅವರು ಒಳ್ಳೆಯ ಡಾಕ್ಟರ್. ಅವರು ರಾಜಕೀಯಕ್ಕೆ ಅಮಾಯಕರು. ಪಾಪ ಅಮಾಯಕರನ್ನು‌ ತಂದು ಬಲಿಪಶು ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಯಾಕೆ ಹೆಚ್.ಡಿ. ಕುಮಾರಸ್ವಾಮಿಗೆ ತಾಕತಿಲ್ವಾ..? ನಿಮಗೆ ಗಂಡಸ್ತನ ಇಲ್ವಾ..? ರಾಮಮಂದಿರ ಕಟ್ತೀವಿ ಅಂತ ಓಡಾಡ್ತಿದ್ರಲ್ಲ, ಅಶ್ವತ್ಥ ನಾರಾಯಣ್. ಹಿಂದೆ ಇಲ್ಲಿ ಉಸ್ತುವಾರಿ ಮಂತ್ರಿ ಆಗ್ರಿದಲ್ಲ ಅವರನ್ನ ನಿಲ್ಲಿಲ್ಲಿಸಬಹದಿತ್ತಲ್ವಾ..? ಎಂದು ಪ್ರಶ್ನಿಸಿದ್ದಾರೆ.

ಮಂಜುನಾಥ್​ರನ್ನು ಹರಕೆ ಕುರಿ ಮಾಡ್ತಾವ್ರೆ

ಅಷ್ಟೆಲ್ಲಾ ಯಾಕೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರೇ ನಿಲ್ಲಬಹುದಿತ್ತಲ್ವಾ..? ಎರಡು ಬಾರಿ ಸಿಎಂ ಆದವ್ರು, ಮಾಜಿ ಸಿಎಂಗೆ ನಿಲ್ಲೋ ತಾಕತಿಲ್ವಾ..? ಡಿ.ಕೆ. ಸುರೇಶ್ ವಿರುದ್ಧ ಪಾಪ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡ್ತಾವ್ರೆ. ಡಿ.ಕೆ. ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲ ಅನ್ನೋದು ಗೊತ್ತಾಗ್ತಿದೆ ಎಂದು ಮೈತ್ರಿ ಪಕ್ಷದ ನಾಯಕರ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES