Thursday, September 19, 2024

ಈ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ, ದಯವಿಟ್ಟು ಪಕ್ಷ ಉಳಿಸಿಕೊಡಿ : ಹೆಚ್.ಡಿ. ಕುಮಾರಸ್ವಾಮಿ ಮನವಿ

ಹಾಸನ : ಈ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ, ದಯವಿಟ್ಟು ಪಕ್ಷ ಉಳಿಸಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಹಾಸನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್‌ ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದರು.

ನನ್ನ ಹಾಗೂ ಸಹೋದರ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ, ಸ್ವಲ್ಪ ಮುಂಗೋಪ ಬೈಯ್ತಾನೆ. ಅದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ, ಅವನನ್ನು ಕ್ಷಮಿಸಿಬಿಡಿ. ನಮ್ಮಲ್ಲಿ ತಪ್ಪುಗಳಾಗಿರಬಹುದು. ಆದರೆ, ತಿದ್ದುಕೊಳ್ಳಲು ಅವಕಾಶ ಕೊಡಿ. ಜನರು ಕ್ಷಮಿಸುತ್ತಾರೆ, ಅದರಲ್ಲಿ ನಂಬಿಕೆ‌ ಇದೆ ಎಂದು ತಿಳಿಸಿದರು.

ನನ್ನ ಹತ್ತಿರ ಟನ್‌ ಗಟ್ಟಲೆ ದುಡ್ಡು ಇಲ್ಲ

ಈ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ, ದಯವಿಟ್ಟು ಪಕ್ಷ ಉಳಿಸಿಕೊಡಿ. ನನ್ನ ಹತ್ತಿರ ಟನ್‌ ಗಟ್ಟಲೆ ದುಡ್ಡು ಇಲ್ಲ. ನಾನು ಆಸ್ತಿ ಸಂಪಾದನೆ ಮಾಡಿಲ್ಲ. ನಿಮ್ಮಂತಹ ಲಕ್ಷಾಂತರ ಜನರನ್ನು ಸಂಪಾದಿಸಿದ್ದೇನೆ. ಇವನು ರೇವಣ್ಣನ ಮಗ ಅಲ್ಲ, ನನ್ನ ಮಗ. ಬಹಳಷ್ಟು ಬದಲಾವಣೆ ತರ್ತಿನಿ, ಅವನೂ ಬದಲಾಗುತ್ತಾನೆ. ಎಲ್ಲಾ ರೀತಿಯ ಬದಲಾವಣೆ ತರಲು ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

RELATED ARTICLES

Related Articles

TRENDING ARTICLES