Thursday, May 9, 2024

ಹುಬ್ಬಳ್ಳಿ-ಧಾರವಾಡದಿಂದ ಸ್ಪರ್ಧೆಗೆ ಜಗದೀಶ್​ ಶೆಟ್ಟರ್ ಒಲವು

ಹುಬ್ಬಳ್ಳಿ: ತಾವು ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಇಂತಹುದ್ದೇ ಕ್ಷೇತ್ರ ಬೇಕೆಂದು ವರಿಷ್ಠರನ್ನು ಒತ್ತಾಯಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ ಗೀತಂ ವಿವಿಯಲ್ಲಿ ವಿದ್ಯಾರ್ಥಿ ಸಾವು: ಆತ್ಮಹತ್ಯೆ ಶಂಕೆ

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ತಮ್ಮನ್ನು ಹಾವೇರಿ ಅಥವಾ ಬೆಳಗಾವಿಯಿಂದ ಸ್ಪರ್ಧಿಸುವಂತೆ ಕೇಳಲಾಗಿದೆ. ಆದರೆ, ಹುಬ್ಬಳಿ-ಧಾರವಾಡದ ಜನತೆ ತಮ್ಮನ್ನು ಬೆಂಬಲಿಸುತ್ತಿದ್ದಾರೆ. ಈ ಮೊದಲು ಲೋಕಸಭಾ ಚುನಾವಣೆ ಸ್ಪರ್ಧೆಗೆ ಒಂದಲ್ಲಾ ಮೂರು ಸಲ ಅವಕಾಶ ನೀಡಲಾಗಿತ್ತು. ಆದರೆ, ಆಸಕ್ತಿ ಇಲ್ಲದ ಕಾರಣ ಸ್ಪರ್ಧಿಸಿರಲಿಲ್ಲ. ಆದರೆ, ಈ ಬಾರಿ ಜನರ ಒತ್ತಡ ಹೆಚ್ಚಾಗಿದೆ.

ಈ ವಿಷಯದಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಹೇಳಿದರೆ ಮಾತ್ರ ತಾವು ಚುನಾವಣೆಗೆ ಸ್ಪರ್ಧಿಸುವುದಾಗಿ ಜಗದೀಶ್ ಶೆಟ್ಟರ್ ಹೇಳಿದರು.

RELATED ARTICLES

Related Articles

TRENDING ARTICLES