Thursday, May 9, 2024

ಸಿ.ಟಿ. ರವಿ ಟಿಕೆಟ್ ಕೇಳಿರೋದು ನಿಜ : ಶೋಭಾ ಕರಂದ್ಲಾಜೆ

ವಿಜಯಪುರ : ಮಾಜಿ ಸಚಿವ ಸಿ.ಟಿ. ರವಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿರೋದು ನಿಜ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಟಿಕೆಟ್ ವಿಚಾರದಲ್ಲಿ ಗೊಂದಲ‌ ಇರೋದು ನಿಜ. ಸಿ.ಟಿ. ರವಿ ಟಿಕೆಟ್ ಅಪೇಕ್ಷೆ ಪಟ್ಟರೂ ತಪ್ಪಲ್ಲ ಎಂದು ತಿಳಿಸಿದರು.

ಕಾರ್ಯಕರ್ತರು ನನ್ನ ವಿರೋಧ ಮಾಡ್ತಿಲ್ಲ, ಒಂದು ಗುಂಪು ವಿರೋಧ ಮಾಡ್ತಿದೆ. ಹೆತ್ತ ತಾಯಿಗೆ ದ್ರೋಹ ಮಾಡಲ್ಲ, ನಾನು ಹಿಂದೆ ಯಾರಿಗೂ ವಿರೋಧ ಮಾಡಿಲ್ಲ. ತಮ್ಮ ಸೋಲನ್ನ ಇನ್ನೊಬ್ಬರ ಮೇಲೆ ಹೊರಿಸಬಾರದು, ಅದು ತಾಯಿಗೆ ಮಾಡಿದ ದ್ರೋಹ ಎಂದು ಆಕ್ರೋಶ ಹೊರಹಾಕಿದರು.

ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ತೀವಿ

ನಮ್ಮದು ಸಂಘ ಪರಿವಾರ ಗಟ್ಟಿ ಇರುವ ಜಿಲ್ಲೆ. ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಬಹುದು. ಹೀಗಾಗಿ, ಬೇರೆಯವರು ಟಿಕೆಟ್ ಕೇಳ್ತಿದ್ದಾರೆ. ನನಗೆ ಎರಡು ಬಾರಿ ಟಿಕೆಟ್ ಕೊಟ್ಟಿದ್ದಾರೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ವಿರೋಧಿಗಳ ವಿರುದ್ಧ ಕಿಡಿಕಾರಿದರು.

ಇದರಿಂದ ನಾನು ವಿಚಲಿತಳಾಗಿಲ್ಲ

ಟಿಕೆಟ್ ತೆಗೆದುಕೊಳ್ಳಲು ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ವ್ಯವಸ್ಥಿತವಾಗಿ ಒಂದು ಗುಂಪು ವಿರೋಧ ಮಾಡ್ತಿದೆ. ಇದರಿಂದ ನಾನು ವಿಚಲಿತಳಾಗಿಲ್ಲ ಎಂದು ಶೋಭಾ ಕರಂದ್ಲಾಜೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

RELATED ARTICLES

Related Articles

TRENDING ARTICLES