ಮೈಸೂರು: ರಾಜಕಾರಣವೇ ದೊಡ್ಡ ಚಾಲೆಂಜ್ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ರಾಜಕೀಯಕ್ಕೆ ನಾನು ಬಂದಿದ್ದೇನೆ. ಸಾಂಬರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಬರುತ್ತವೆ ಅದು ಸಹಜ ಎಲ್ಲದಕ್ಕೂ ನಾನು ಸಿದ್ದವಾಗಿದ್ದೇನೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದೇ ಟೀಕೆಗಳು ಬರಬಹುದು ಅದನ್ನೂ
ನಾವು ಜೀರ್ಣಿಸಿಕೊಳ್ಳಬೇಕು.ರಾಜಕೀಯಕ್ಕೆ ಬಂದಾಗ ಅದೆಲ್ಲವೂ ಸಹಜ. ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ ಎಂದರು.
ನನಗೆ ಮೈಸೂರಿನ ಅಭಿವೃದ್ಧಿ ವಿಚಾರವಾಗಿ ನನ್ನದೆ ಆದ ಕನಸುಗಳಿದೆ.
ರಾಜಸ್ಥಾನದ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದು ಇಲ್ಲ. ನನ್ನ ತಾಯಿಯ ಅನುಮತಿ ಹಾಗೂ ಆಶೀರ್ವಾದ ಪಡೆದು ಚುನಾವಣೆಗೆ ಬಂದಿದ್ದೇನೆ.ನನಗೆ ಮೈಸೂರಿನ ಅಭಿವೃದ್ಧಿ ವಿಚಾರವಾಗಿ ನನ್ನದೆ ಆದ ಕನಸುಗಳಿದೆ ಎಂದರು.ದಕ್ಷಿಣ ಭಾರತದ ಪ್ರವಾಸೋದ್ಯಮ ಕೇಂದ್ರವಾಗಿ ಮೈಸೂರು ಮಾಡಬೇಕೆಂಬ ಆಸೆ ಇದೆ ಎಂದರು.
ಎಸಿ ರೂಂ ಬಿಟ್ಟು ಬರುವುದು ದೊಡ್ಡ ವಿಚಾರ ಅಲ್ಲ
ನಮ್ಮ ಕುಟುಂಬದ ವ್ಯಾಜ್ಯಗಳು ಅವು ಕಾನೂನಿನ ವ್ಯಾಪ್ತಿಯಲ್ಲಿದೆ.ಅವುಗಳ ಅನುಸಾರ ಅದು ನಡೆಯುತ್ತದೆ.
ಅದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ.ಎಸಿ ಕೋಠಡಿಯಿಂದ ಹೊರ ಬರುವುದು ದೊಡ್ಡ ವಿಚಾರ ಅಲ್ಲ.ರಾಜ ಪ್ರಭುತ್ವ ಎನ್ನುವುದೆಲ್ಲ ಬೇರೆ.ಸಂವಿಧಾನದಲ್ಲಿ, ಕಾನೂನಿನಲ್ಲಿ, ದೇವರ ಮುಂದೆ ಎಲ್ಲರೂ ಒಂದೇ ಎಂದರು.