Monday, May 20, 2024

ಯಡಿಯೂರಪ್ಪ ಹರಸಿದ್ದಾರೆ, ಆಶೀರ್ವಾದ ಮಾಡಿದ್ದಾರೆ, ಪ್ರಚಾರಕ್ಕೂ ಬರ್ತಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಯಡಿಯೂರಪ್ಪ ಅವರು ಸದಾಕಾಲ ರಾಜಕೀಯವಾಗಿ ಆಶಿರ್ವಾದ ಮಾಡಿ ಹರಸಿದ್ದಾರೆ. ಅವರ ಆಶೀರ್ವಾದ ಪಡೆದಿದ್ದೇನೆ. ಪ್ರಚಾರಕ್ಕೂ ಕೂಡ ಬರುತ್ತೇನೆ ಅಂತ ಹೇಳಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಅವರು, ನಿನ್ನೆ ಪಕ್ಷದ ವರಿಷ್ಠರು ನಿರ್ಣಯ ಮಾಡಿ ನನ್ನ ಹೆಸರು ಪ್ರಕಟ ಮಾಡಿದ್ದಾರೆ. ಈ ಬಾರಿ ವಿನೂತನ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಾಗಿದೆ ಎಂದು ತಿಳಿಸಿದರು.

ಡಾ. ಮಂಜುನಾಥ್ ಅವರು ಲಕ್ಷಾಂತರ ಜನರಿಗೆ ಆರೋಗ್ಯ ಕಾಪಾಡಿದ್ದಾರೆ. ಇದು ಲಕ್ಷಾಂತರ ಜನರಿಗೆ ಸಂದೇಶ. ಪಕ್ಷ ಪುರಸ್ಕಾರ ನೀಡುತ್ತೆ ಎನ್ನುವ ಸಂದೇಶ. ಮತ್ತೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿರೋದು. ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಗಿದ್ರೆ ಅದಕ್ಕೆ ಒಡೆಯರ್ ಅವರು ಕಾರಣ. ಬ್ಯಾಕ್​ವರ್ಡ್ ಕ್ಲಾಸ್ ಅಭಿವೃದ್ಧಿ ಮಾಡಿದ್ದಾರೆ. ಆ ಮನೆತನಕ್ಕೆ ಟಿಕೆಟ್ ನೀಡಿರೋದು ದಕ್ಷಿಣ ಕರ್ನಾಟಕಕ್ಕೆ ಸಂತಸ ತಂದಿದೆ ಎಂದು ಹೇಳಿದರು.

ಸಚಿವರೂ ಸೋಲೋ ಭಯದಲ್ಲಿ ಇದ್ದಾರೆ

ಹಳೆ ಬೇರು, ಹೊಸ ಚಿಗುರಿಗೂ ಅವಕಾಶ ನೀಡಿದೆ. ಈ ರೀತಿ ನಿರ್ಣಯ ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಕಾಂಗ್ರೆಸ್​ನಲ್ಲಿ ಆ ಪರಿಸ್ಥಿತಿ ಇಲ್ಲ. ಸಚಿವರೂ ಸೋಲೋ ಭಯದಲ್ಲಿ ಇದ್ದಾರೆ. ಅನಿವಾರ್ಯ ಕಾರಣದಿಂದ ನಾನು ನಿಂತಿದ್ದು. ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನಕ್ಕೆ ನಾನು ಒಪ್ಪಿದ್ದೇನೆ ಎಂದು ತಿಳಿಸಿದರು.

ರೀತಿ ಹೇಳಿಕೆ ಕೊಡೋದು ಡಿಕೆಶಿ ಚಾಳಿ

ಇದೇ ವೇಳೆ ಟಿಕೆಟ್ ಸಿಗದ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ಕೊಟ್ಟರು. ಅಲ್ಲಿ ನಿಲ್ಲಲು ಯಾರೂ ಇಲ್ಲ. ಈ ರೀತಿ ಹೇಳಿಕೆ ಕೊಡೋದು ಡಿ.ಕೆ. ಶಿವಕುಮಾರ್ ಅವರ ಚಾಳಿಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಕುಟುಕಿದರು.

RELATED ARTICLES

Related Articles

TRENDING ARTICLES