ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವೋಟು ಹಾಕದಿದ್ದರೆ ಅಭಿವೃದ್ಧಿ ಕೆಲಸ ಡ್ರಾಪ್ ಮಾಡುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಪ್ರಚಾರ ಕಾರ್ಯದ ವೇಳೆ ಸಚಿವರು ಈ ರೀತಿ ಹೇಳಿಕೆ ನೀಡಿದ್ದಾರೆ.
ಗ್ರಾಮದಲ್ಲಿನ ರಸ್ತೆ ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ಜನರು ಸಚಿವರಿಗೆ ಕೇಳಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ಕೆಲಸ ಆಗಬೇಕು ಅಂದ್ರೆ ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಮೊದಲು ವೋಟು ಹಾಕಿ ಎಂದು ಹೇಳಿದ್ದಾರೆ.
ನಗು ನಗುತ್ತಲೆ ಜನರಿಗೆ ಎಚ್ಚರಿಕೆ ನೀಡಿದ ಸಚಿವ ಎನ್. ಚಲುವರಾಯಸ್ವಾಮಿ, ವೋಟು ಹಾಕಿ ನೂತನ ರಸ್ತೆಗಳನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮೊದಲು ಮತ ಹಾಕಿ, ಇಲ್ಲದಿದ್ದರೆ ಅಭಿವೃದ್ಧಿ ನಿಲ್ಲಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.
ಬಿಜೆಪಿಗೆ ವೋಟು ಹಾಕಿದ್ರೆ ಗ್ಯಾರಂಟಿ ನಿಲ್ಲುತ್ತೆ
ಈ ಹಿಂದೆ ಮಾಗಡಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ವೋಟು ಹಾಕಿದ್ರೆ ಉಚಿತ ಗ್ಯಾರಂಟಿ ನಿಲ್ಲುತ್ತದೆ ಎಂದು ಹೇಳಿದ್ದರು. ನಿಮಗೆ ಗ್ಯಾರಂಟಿ ಬೇಕಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಎಂದು ಹೇಳಿದ್ದರು. ಇದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದರು.