ದೆಹಲಿ: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಿಂಗ್ ಸಂಧು, ಜ್ಞಾನೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಅರುಣ್ ಗೋಯಲ್ ದಿಢೀರ್ ನಿವೃತ್ತಿ ಬಳಿಕ ಏಕಕಾಲಕ್ಕೆ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಹೊಸ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ ಎಂದು ಸಮಿತಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, ಇಬ್ಬರು ಚುನಾವಣಾ ಆಯುಕ್ತರ ಸ್ಥಾನ ಭರ್ತಿ ಮಾಡುವುದಕ್ಕಾಗಿ ಆಯ್ಕೆ ಸಮಿತಿಯ ಮುಂದೆ ಆರು ಹೆಸರುಗಳ ಶಿಫಾರಸು ಬಂದಿದ್ದವು. ಸಂಧು ಮತ್ತು ಕುಮಾರ್ ಅವರ ಹೆಸರುಗಳನ್ನು ಉನ್ನತಾಧಿಕಾರ ಸಮಿತಿಯ ಹೆಚ್ಚಿನ ಸದಸ್ಯರು ಅಂತಿಮಗೊಳಿಸಿದ್ದಾರೆ.
ಆಯ್ಕೆ ಸಮಿತಿಗೆ ಶಿಫಾರಸು ಆಗಿದ್ದ ಆರು ಹೆಸರುಗಳಿವು
ಮಾಜಿ ಅಧಿಕಾರಿಗಳಾದ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖ್ಬೀರ್ ಸಿಂಗ್ ಸಂಧು, ಸುಧೀರ್ ಕುಮಾರ್ ಗಂಗಾಧರ್ ರಹಾಟೆ ಅವರ ಹೆಸರುಗಳನ್ನು ಶೋಧ ಸಮಿತಿ ಅಂತಿಮಗೊಳಿಸಿತ್ತು.