Friday, May 17, 2024

ಗೀತಂ ವಿವಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; 7 ಜನರ ವಿರುದ್ಧ ದೂರು ದಾಖಲು

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿವಿಯಲ್ಲಿ ಆಂಧ್ರ ಮೂಲದ ದಾಸರಿ ಬ್ರಹ್ಮಸಾಯಿ ರೆಡ್ಡಿ ಎಂಬ ವಿದ್ಯಾರ್ಥಿ ಹಾಸ್ಟೆಲ್​ನ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮೈಸೂರು-ಕೊಡಗು ಜನತೆಗೊಂದು ಮೈಸೂರು ರಾಜ ಯದುವೀರ್ ಪತ್ರ

ಈ ಘಟನೆ ಸಂಬಂಧ ಗೀತಂ ವಿವಿ ಉಪಕುಲಪತಿ, ಗುತ್ತಿಗೆದಾರ, ಸೆಕ್ಯೂರಿಟಿ ಇನ್​ಚಾರ್ಜ್ ಸೇರಿ 7 ಜನರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ವಿದ್ಯಾರ್ಥಿ ತಂದೆ ನೀಡಿದ ದೂರಿನ‌ ಆಧಾರದ ಮೇಲೆ IPC 304 ಅಡಿಯಲ್ಲಿ ದೂರು ದಾಖಲಾಗಿದೆ. ಉಪ ಕುಲಪತಿ ಆಚಾರ್ಯ, ವಿವಿ ಅಧ್ಯಕ್ಷ ಭರತ್, ಕಾಂಟ್ರಾಕ್ಟರ್ ಮುನಿಕೃಷ್ಣ, ಆಪರೇಷನ್ ಕಾಂಟ್ರಾಕ್ಟರ್ ವಿಜಯ್ ಬಾಸ್ಕರ್, ಸೆಕ್ಯೂರಿಟಿ ಇನ್ಚಾರ್ಜ್ ವಿಜಯ್ ಗಜ್ಜಿ, ರಾಘವೇಂದ್ರ, ವಾರ್ಡನ್ ಇನ್ಚಾರ್ಜ್ ಟಿಂಟೂ, ಮತ್ತು ಕೊಪ್ಪಸ್ವಾಮಿ ವಿರುದ್ದ ಪ್ರಕರಣ ದಾಖಲಾಗಿದೆ.

ಮುಂಜಾಗ್ರತಾ ಕ್ರಮವಿಲ್ಲದೆ ಹಾಸ್ಟೇಲ್ ಕಟ್ಟಡ ಕಾಮಗಾರಿ ಮಾಡುತ್ತಿದ್ದು ವಿದ್ಯಾರ್ಥಿಗಳು ಕಾಮಗಾರಿ ಸ್ಥಳಕ್ಕೆ ಹೋಗದಂತೆ ಸೆಕ್ಯೂರಿಟಿಗಳ ನೇಮಕ ಮಾಡದಿರುವುದು ಸೇರಿದಂತೆ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES