Thursday, May 9, 2024

ಮಂಡ್ಯದಿಂದ ಮತ್ತೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ?: ಮಾರ್ಚ್‌ 25ಕ್ಕೆ ಘೋಷಣೆ ಸಾಧ್ಯತೆ

ಮಂಡ್ಯ: ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಮತ್ತೆ ಕಣಕ್ಕೆ ಇಳಿಯಬೇಕು ಎಂದು ಕಾರ್ಯಕರ್ತರು ಇಂದು ಆಶಯ ವ್ಯಕ್ತಪಡಿಸಿದ್ದಾರೆ.

ಹೌದು,ಇಂದು ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಹಲವು ನಾಯಕರು, ಕಾರ್ಯಕರ್ತರು ಕುಮಾರಸ್ವಾಮಿ ಅಥವಾ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಕೂಗಿದರು.

ಸಭೆಯಲ್ಲಿ ಅವರ ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ನಿಖಿಲ್ ಕುಮಾರಸ್ವಾಮಿಯಲ್ಲಿ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮಾರ್ಚ್‌ 25ಕ್ಕೆ ಮಂಡ್ಯ ಅಭ್ಯರ್ಥಿ ಘೋಷಣೆ

ಮಾರ್ಚ್‌ 24ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್‌ 25ಕ್ಕೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಸಭೆಯಲ್ಲಿ ಹೇಳಿದ್ದಾರೆ.

ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಈ ಬಾರಿಯ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್‌ ಸ್ಪರ್ಧೆಯ ಬಗ್ಗೆ ಒಲವು ವ್ಯಕ್ತಪಡಿಸುತ್ತಿರುವ ಕಾರಣ ಈಗ ಅವರ ನಿಲುವು ಏನು ಎಂಬುವುದನ್ನು ಕಾದು ನೋಡಬೇಕಿದೆ.

RELATED ARTICLES

Related Articles

TRENDING ARTICLES