Friday, May 10, 2024

ಸುಮಲತಾ ನನ್ನ ಅಕ್ಕ ಇದ್ದಂತೆ: ಹೆಚ್​.ಡಿ.ಕುಮಾರಸ್ವಾಮಿ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ ರಾಜಕಾರಣದಲ್ಲಿ ಸಂಘರ್ಷಗಳು ಬರೋದು ಸಹಜ. ಅದನ್ನು ಮುಂದುವರಿಸಿಕೊಂಡು ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಂಬಂಧ ಸಭೆಯಲ್ಲಿ ಮಾತನಾಡಿದ ಅವರು,ಅಂಬರೀಶ್ ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್ ಕುಮಾರ್, ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನು. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ, ಗೌರವ ಕೊಟ್ಟಿದ್ದೇನೆ. ವಿಷ್ಣುವರ್ಧನ್ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನಮ್ಮ ಕರ್ತವ್ಯ.

ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯದ ಜನರಿಗೂ ಗೌರವ ನೀಡಿದ್ದೇವೆ. ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ‌ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂಬ ಭರವಸೆಯನ್ನು ನೀಡಿದ್ದಾರೆ.

RELATED ARTICLES

Related Articles

TRENDING ARTICLES