ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯವು ಜಾಮೀನು ಮಂಜೂರಾಗಿದೆ.
ದೆಹಲಿ ಅಕ್ರಮ ಅಬಕಾರಿ (ಮದ್ಯ) ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯವು ಜಾಮೀನು ನೀಡಿದೆ.
ಇಂದು ಅರವಿಂದ್ ಕೇಜ್ರಿವಾಲ್ ಕೋರ್ಟ್ಗೆ ಹಾಜರಾಗುಂತೆ ಸೂಚನೆ ನೀಡಿತ್ತು. 15,000 ಬಾಂಡ್ ಮತ್ತು 1 ಲಕ್ಷದ ಶ್ಯೂರಿಟಿಯೊಂದಿಗೆ ಅರವಿಂದ ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಿದೆ.
8 ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಲು ಅರವಿಂದ್ ಕೇಜ್ರೀವಾಲ್ ವಿಫಲರಾಗಿದ್ದರು. ಹೀಗಾಗಿ, ಇಡಿ ಅಧಿಕಾರಿಗಳು ಕೇಜ್ರಿವಾಲ್ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಿದ್ದರು. ಇದೇ 16ರಂದು ತಮ್ಮ ಮುಂದೆ ಹಾಜರಾಗುವಂತೆ ಸಿಎಂಗೆ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿದ್ದರು.
ಇಡಿ ಬಿಜೆಪಿ ಆದೇಶದಂತೆ ಕೆಲಸ ಮಾಡ್ತಿದೆ
ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ, ನಿಮ್ಮ ನೋಟಿಸ್ ಅನ್ನು ವಾಪಸ್ಸು ಪಡೆದುಕೊಳ್ಳಿ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇಡಿ ಬಿಜೆಪಿ ಆದೇಶದ ಮೇರೆಗೆ ಈ ಕೆಲಸವನ್ನು ಮಾಡುತ್ತಿದೆ. ಇನ್ನು ಇದನ್ನು ನಾನು ಒಪ್ಪುವುದಿಲ್ಲ, ತಕ್ಷಣ ತನ್ನ ಮೇಲೆ ಜಾರಿ ಮಾಡಿದ ನೋಟಿಸ್ ವಾಪಸ್ಸು ಪಡೆಯುವಂತೆ ಇಡಿಗೆ ಪತ್ರದ ಮೂಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು.