Sunday, April 28, 2024

ಕುಮಾರಸ್ವಾಮಿ ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ರು : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ರು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ರು ಎಂಬ ಕುಮಾರಸ್ವಾಮಿ ಹೇಳಿಕೆಗೆ ಮಂಡ್ಯದಲ್ಲಿ ಟಾಂಗ್ ಕೊಟ್ಟರು.

ಕುಮಾರಸ್ವಾಮಿ ಅವರಪ್ಪ, ಅವರ ಭಾವ ಬೇಡ ಎಂದಾಗ. 39 ಜನ ಶಾಸರ ಬಳಿ ಅವರು ಹೇಗೆ ನಿಂತಿದ್ದರು, ಕೇಳಿ. ನನ್ನನ್ನು ಜನ ಗೆಲ್ಲಿಸಿದ್ದಕ್ಕೆ ಮಂತ್ರಿ ಮಾಡಿದ್ರು. ಈಗಲೂ ಜನ ಗೆಲ್ಲಿಸಿರುವುದಕ್ಕೆ ಮಂತ್ರಿ ಮಾಡಿದ್ದಾರೆ ಎಂದು ಕುಟುಕಿದರು.

ಕೆಲವರಿಗೆ ಮಂಡ್ಯ ಅಭಿವೃದ್ಧಿ ಬೇಕಿಲ್ಲ

ಜೆಡಿಎಸ್‌ನವರು ಹಳೇ ಭಾಷಣ ಹೊಡೆಯುತ್ತಿದ್ದಾರೆ. ಭಾಷಣದಲ್ಲಿ ಅವರು ಮುಂದೆ ಇದ್ದಾರೆ, ನಾವು ಅಭಿವೃದ್ಧಿಯಲ್ಲಿ ಮುಂದಿದ್ದೇವೆ. ನಾವು ಬರೀ ಬಾಯಲ್ಲಿ ಹೇಳಲ್ಲ, ಕೆಲಸ ಮಾಡಿ ತೋರಿಸುತ್ತೇವೆ. ಕೆಲವರಿಗೆ ಮಂಡ್ಯ ಅಭಿವೃದ್ಧಿ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅವ್ರನ್ನ ಕೇಳಿ ನಾನು ತೀರ್ಮಾನ ಮಾಡಬೇಕಾ?

ಹೊಸ ಫ್ಯಾಕ್ಟರಿ ಬೇಡ, ಕೃಷಿ ವಿವಿ ಬೇಡ ಅವರಿಗೆ. ಇವರು ಮೆಡಿಕಲ್ ಕಾಲೇಜನ್ನು ಶಿಫ್ಟ್ ಮಾಡಲು ಹೇಳಿ. ಅಭಿವೃದ್ಧಿ ಆದರೆ ಜಿಲ್ಲೆ ಇವರ ಹಿಡಿತಕ್ಕೆ ಸಿಗಲ್ಲ. ಅವ್ರನ್ನ ಕೇಳಿ ನಾನು ತೀರ್ಮಾನ ಮಾಡಬೇಕಾ..? ಜನರ ಅಗತ್ಯಗಳಿಗೆ ಅಭಿವೃದ್ಧಿ ಮಾಡ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದರು.

RELATED ARTICLES

Related Articles

TRENDING ARTICLES