ಬೆಂಗಳೂರು : ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಬರ್ತ್ಡೇ ಸಂಭ್ರಮ ಮನೆಮಾಡಿದೆ. ತಮ್ಮ ನೆಚ್ಚಿನ ನಟ ರಾಜ್ಕುಮಾರ್ ಅವರ ಜನ್ಮದಿನವನ್ನು ಆಚರಿಸಲು ಪುನೀತ್ ಪುಣ್ಯಭೂಮಿ ಬಳಿ ಬೆಳ್ಳಂ ಬೆಳಗ್ಗೆ ಅಭಿಮಾನಿಗಳು ಸಾಲುಗಟ್ಟಿ ನಿಂತು ಅಪ್ಪು ಸಮಾಧಿ ಬಳಿ ಸಂಭ್ರಮಾಚರಣೆ ನಡೆಸಿದ್ದಾರೆ.
ಈಗಾಗಲೇ ಪುನೀತ್ ರಾಜ್ಕುಮಾರ್ ಕುಟುಂಬಸ್ಥರು ಮಧ್ಯರಾತ್ರಿಯೇ ಸಮಾಧಿ ಬಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ, ಮಹಾಲಕ್ಷ್ಮಿ ಲೇಔಟ್ ನ ಶಾಸಕರು ಹಾಗು ಮಾಜಿ ಸಚಿವರಾದ ಮಹದೇವಯ್ಯ ಅವರು ಕೂಡ ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ದಿನಭವಿಷ್ಯ: ಇಂದು ರವಿ ಯೋಗ, ಈ ರಾಶಿಯವರಿಗೆ ಭಾಗ್ಯೋದಯ
ಇನ್ನು, ಅಪ್ಪು ಸಮಾದಿ ದರ್ಶನಕ್ಕೆ ಭೇಟಿ ನೀಡುವ ಅಭಿಮಾನಿಗಳಿಗಾಗಿಯೇ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ಜನ್ಮದಿನದ ವಿಶೇಷವಾಗಿ ರಕ್ತದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಬಳಿಕ ಅಭಿಮಾನಿಗಳಿಂದ ಬೃಹತ್ ರ್ಯಾಲಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ವೇಳೆ ಅಪ್ಪು ಡಾನ್ಸ್ ಯುವಕರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಪ್ಪು ಜನ್ಮದಿನದ ಪ್ರಯುಕ್ತ ಸಮಾಧಿ ಬಳಿಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ.