Friday, May 3, 2024

ಈಶ್ವರಪ್ಪ ನೋವಿನಲ್ಲಿದ್ದಾರೆ, ಇದಕ್ಕೆ ಜನ ಉತ್ತರ ಕೊಡ್ತಾರೆ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಈಶ್ವರಪ್ಪ ಅವರು ನೋವಿನಲ್ಲಿದ್ದಾರೆ, ಅವರ ಜೊತೆ ನಾವು ಮಾತನಾಡ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ. ರಾಜ್ಯದ ಯಾವುದೇ ಕ್ಷೇತ್ರದ ಟಿಕೆಟ್ ಹಂಚಿಕೆ ಮಾಡುವ ನಿರ್ಧಾರ ಹೈಕಮಾಂಡ್‌ ಮಾಡಲಿದೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಅಪ್ಪ ಮಕ್ಕಳ ಕಪಿಮುಷ್ಟಿಯಲ್ಲಿ ಪಕ್ಷ ಇದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ಕ್ಷೇತ್ರದ, ರಾಜ್ಯದ ಜನ ಉತ್ತರ ನೀಡುತ್ತಾರೆ. ನಾನು ಈ ವಿಚಾರದಲ್ಲಿ ಹೆಚ್ಚು ಮಾತಾಡೋಕೆ ಇಚ್ಛೆಪಡೋದಿಲ್ಲ. ಅವರು ಹಿರಿಯರಿದ್ದಾರೆ, ಪಕ್ಷದಲ್ಲಿ ಇದ್ದಾರೆ. ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂಬ ವಿಶ್ವಾಸದಲ್ಲಿದ್ದೇನೆ. ಅವರು ನೋವಿನಲ್ಲಿದ್ದಾರೆ, ಎಲ್ಲಾ ಬಗೆಹರಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡ್ಮೂರು ದಿನದಲ್ಲಿ ಅಭ್ಯರ್ಥಿ ಫೈನಲ್

ಎರಡನೇ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿ, ನೀವು ಯಾವಾಗ ಅನುಮತಿ ಕೊಡ್ತಿರಿ. ಆವಾಗ ಬಿಡುಗಡೆ ಆಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಜೆಡಿಎಸ್​ಗೆ ಸೀಟು ‌ಹಂಚಿಕೆ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿಯವರು ರಾಷ್ಟ್ರೀಯ ನಾಯಕರನ್ನ ಭೇಟಿ ಮಾಡಿದ್ದಾರೆ. ಏನು ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಇಲ್ಲ. ಇನ್ನೂ ಎರಡ್ಮೂರು ದಿನದಲ್ಲಿ ಅಭ್ಯರ್ಥಿ ಫೈನಲ್ ಆಗಿ, ಪಟ್ಟಿ ಬಿಡುಗಡೆ ಆಗುತ್ತೆ ಎಂದು ವಿಜಯೇಂದ್ರ ಹೇಳಿದರು.

RELATED ARTICLES

Related Articles

TRENDING ARTICLES