Wednesday, May 22, 2024

ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಎಲೆಕ್ಷನ್​ ಮುಗಿದ ಮೇಲೆ ಗೊತ್ತಾಗಲಿದೆ: ವಿಜಯೇಂದ್ರ

ಶಿವಮೊಗ್ಗ: ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಎಲೆಕ್ಷನ್​ ಮುಗಿದ ಮೇಲೆ ಗೊತ್ತಾಗಲಿದೆ ಎಂದು ಬಿ.ವೈ ವಿಜಯೇಂದ್ರ ಈಶ್ವರಪ್ಪನಿಗೆ ಟಾಂಗ್​ ಕೊಟ್ಟಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪನವರ ಫ್ಯಾಮಿಲಿ ಬಗ್ಗೆ ಮಾತನಾಡುವುದು ಅರ್ಥಹೀನ ಸೈಕಲ್ ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಕಟ್ಟಿದ ಫಲವಾಗಿ ರಾಜ್ಯದಲ್ಲಿ ಇದು ಪಕ್ಷ ಬಲಿಷ್ಠವಾಗಿದೆ.ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ ಎಂದು ಎಂದು ಕೆ.ಎಸ್​ ಈಶ್ವರಪ್ಪನವರಿಗೆ ಟಾಂಗ್​ ನೀಡಿದ್ದಾರೆ.

ವರಿಷ್ಠರು ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತಾರೆ.ಸಾಮೂಹಿಕವಾಗಿ ಚರ್ಚೆ ಮಾಡಿ  ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.ಗೆಲ್ಲುವ ಪಕ್ಷಕ್ಕೆ ಸಮಸ್ಯೆಗೆ ಸಿಲುಕುತ್ತಾ ಇರುತ್ತವೆ.
ಕಾಂಗ್ರೆಸ್​ಗೆ ಸಮಸ್ಯೆ ಯಾಕೇ ಇಲ್ಲ ಅಂದ್ರೆ ಅಲ್ಲಿ ಹೋದ್ರೆ ಠೇವಣಿ ಸಿಗೋದಿಲ್ಲ ಎನ್ನುವುದು ಗೊತ್ತಿದೆ ಅದಕ್ಕೆ ಸಮಸ್ಯೆ ಇಲ್ಲ ಎಂದರು.

ಕೋಲಾರ ಬಿಜೆಪಿಗೆ ಬಿಟ್ಟು ಕೊಡುವ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ.
ಮಂಡ್ಯ ಟಿಕೆಟ್ ಬಗ್ಗೆ ಸುಮಲತಾ ದೆಹಲಿ ಭೇಟಿ ಬಗ್ಗೆ ಉತ್ತರಿಸಲು ವಿಜಯೇಂದ್ರ ನಕಾರ ತೋರಿದ್ದಾರೆ.

RELATED ARTICLES

Related Articles

TRENDING ARTICLES