ಬೆಂಗಳೂರು: ಡಿವಿ ಸದಾನಂದ ಗೌಡ ನಮ್ಮ ಪಕ್ಷ ಬಿಡಲ್ಲ ಬಿಜೆಪಿಯಲ್ಲೇ ಇರ್ತಾರೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ನಾಯಕರಿಗೆ ಅವರ ನಾಯಕರಿಗಿಂತ ನಮ್ಮ ಪಕ್ಷದ ನಾಯಕರ ಮೇಲೆಯೇ ಪ್ರೀತಿ ಹೆಚ್ಚಾಗಿದೆ. ಡಿವಿಎಸ್ ಅವರು ಪಕ್ಷ ಬಿಡಲ್ಲ.ಕಳೆದೊಂದು ವಾರದ ಎಂಬಿಪಾಟೀಲ್, ಬೇರೆಯವರ ಹೇಳಿಕೆ ಗಮನಿಸಿದರೆ ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಂಗಿದೆ.ಎಲ್ಲವೂ ಸರಿಯಾಗಲಿದೆ ಎಂದರು.
ಈಶ್ವರಪ್ಪ ಬಂಡಾಯ ವಿಚಾರವಾಗಿ ಮಾತನಾಡಿದ ಅವರು,ಈಶ್ವರಪ್ಪ ಮನವೊಲಿಕೆ ಪ್ರಯತ್ನ ಕೈಬಿಡಲ್ಲ.ಅವರು ಹಿರಿಯರು, ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿದೆ.ಅವರಿಗೆ ಸತ್ಯ ಅರ್ಥ ಆದ ಮೇಲೆ ಎಲ್ಲವೂ ಸರಿಯಾಗಲಿದೆ.ಇವತ್ತು,ನಾಳೆ ದೆಹಲಿಯಲ್ಲಿ ಸಭೆ ಇದೆ.ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ತಿಳಿಸಿದ್ದರು.