Sunday, May 19, 2024

ಇದು RCBಯ ಹೊಸ ಅಧ್ಯಾಯ : ಕನ್ನಡದಲ್ಲೇ ವಿರಾಟ್ ಕೊಹ್ಲಿ ಮಾತು

ಬೆಂಗಳೂರು : ‘ಇದು ಆರ್‌ಸಿಬಿಯ ಹೊಸ ಅಧ್ಯಾಯ’ ಎಂದು ಆರ್​ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದರು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್‌ಸಿಬಿ ತಂಡದ ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ ವಿರಾಟ್‌ ಕೊಹ್ಲಿ ಕನ್ನಡದಲ್ಲಿಯೇ ಮಾತನಾಡಿದರು.

ಕೊಹ್ಲಿ ಅವರು ಕನ್ನಡದಲ್ಲೇ ಮಾತನಾಡುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆಯೊಂದಿಗೆ ಹರ್ಷ ವ್ಯಕ್ತಪಡಿಸಿದರು.

ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್‌ಸಿಬಿ ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿತು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಬದಲಾಯಿತು.

ಹೊಸ ಅಧ್ಯಾಯದ ಸಮಯ

‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು ನಮ್ಮ ಹೊಸ ಅಧ್ಯಾಯದ ಸಮಯ. ನಿಮಗೆ ಪ್ರಸ್ತುತಪಡಿಸಲಾಗುತ್ತಿದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿಮ್ಮ ತಂಡ, ನಿಮ್ಮ RCB!’ ಎಂದು ಎಕ್ಸ್‌ನಲ್ಲಿ RCB ಪೋಸ್ಟ್‌ ಮಾಡಿದೆ.

ಅದ್ಭುತವಾಗಿತ್ತು ಅನ್​ಬಾಕ್ಸ್​ ಈವೆಂಟ್

ಆರ್​ಸಿಬಿ ಅನ್​ಬಾಕ್ಸ್​ ಈವೆಂಟ್ ಅದ್ಭುತವಾಗಿತ್ತು. ಆರ್​ಸಿಬಿ ತಂಡ ಪುರುಷ ಹಾಗೂ ಮಹಿಳಾ ಆಟಗಾರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಾವಿರಾರು ಅಭಿಮಾನಿಗಳು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರಿಂದ ಇಡೀ ಮೈದಾನವೇ ಗಿಜಿಗುಡುತ್ತಿತ್ತು.

RELATED ARTICLES

Related Articles

TRENDING ARTICLES