ಹಾಸನ : ಡ್ರಿಲ್ಲಿಂಗ್ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ನಮ್ಮ ಮೆಟ್ರೋ ಸಿಬ್ಬಂದಿಯಿಂದ ಮಹಿಳೆ ಮುಂದೆ ಅಸಭ್ಯ ವರ್ತನೆ!
ಚನ್ನರಾಯಪಟ್ಟಣ ನಿವಾಸಿಯಾದ ಮುಂಜಾಮಲ್ (28), ವಿದ್ಯುತ್ ಶಾಕ್ ಗೆ ಬಲಿಯಾದ ಯುವಕ, ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುಂಜಾಮಿಲ್, ಕಲ್ಕೆರೆ ಗ್ರಾಮದಲ್ಲಿ ತೇರು ನಿಲ್ಲಿಸುವ ಮನೆಯ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು, ಈ ಮನೆಯಲ್ಲಿ ಡ್ರಿಲ್ಲಿಂಗ್ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.