ನವದೆಹಲಿ : ಕಾಂಗ್ರೆಸ್ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಟಿಕೆಟ್ ಆಕಾಂಕ್ಷಿ ವೀಣಾ ಕಾಶೆಪ್ಪನವರ್ ಕಣ್ಣೀರಿಟ್ಟಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿರುವ ವೀಣಾ ಕಾಶಪ್ಪನವರ್ ಅವರಿಗೆ ಈ ಬಾರಿ ಟಿಕೇಟ್ ತಪ್ಪುವ ಎಲ್ಲಾ ಸಾಧ್ಯತೆಗಳಿದೆ. ದೆಹಲಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ಯಾವೊಬ್ಬ ಶಾಸಕರು ಇರಲಿಲ್ಲ. ಅಂಥ ಸಂದರ್ಭದಲ್ಲಿ ಸ್ಪರ್ಧೆ ಮಾಡಲು ಯಾರು ಮುಂದೆ ಬಂದಿರಲಿಲ್ಲ, ಆದರೇ, ನಾನು ಸ್ಪರ್ಧೆ ಮಾಡಿ ಸೋಲು ಗೆಲುವನ್ನು ಲೆಕ್ಕಿಸದೇ ಏಕಾಂಗಿ ಹೋರಾಟ ಮಾಡಿದ್ದೆ, ಆದರೇ, ಇದೀಗ ಕ್ಷೇತ್ರದಲ್ಲಿ ಒಟ್ಟು 5 ಶಾಸಕರಿದ್ದರೂ ನನಗೆ ಅವಕಾಶ ನೀಡಲು ನಿರಾಕರಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ: ಮಾರ್ಚ್ 22ಕ್ಕೆ 5 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ: ಬಿಎಸ್ ಯಡಿಯೂರಪ್ಪ
ಇನ್ನು, ಸಂಯುಕ್ತ ಪಾಟೀಲ್ ಕುರಿತು ಮಾತನಾಡಿದ ಅವರು, ಸಂಯುಕ್ತ ಪಾಟೀಲ್ ಯಾರೆಂದು ಕ್ಷೇತ್ರದವರಿಗೆ ಗೊತ್ತಿಲ್ಲ, ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಪರಿಗಣಿಸುತ್ತಿ, ಸಂಜೆ ವರೆಗೆ ಕಾಯುತ್ತೇನೆ ಪಟ್ಟಿ ಬಿಡುಗಡೆಯಾದ ಬಳಿಕ ಮತ್ತೆ ಮಾತನಾಡುತ್ತೇನೆ ಎಂದು ಕಣ್ಣೀರಿಟ್ಟರು.